ಪಣಜಿ : ಕಾಂಗ್ರೇಸ್ ಪಕ್ಷವು ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹಗಲುಗನಸು ಕಾಣುವುದನ್ನು ನಿಲ್ಲಿಸುವಂತೆ ಗೋವಾ ಬಿಜೆಪಿ ಹೇಳಿದೆ.
ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸೋಲು ಅನುಭವಿಸಲಿದೆ ಎಂದು ಕಾಂಗ್ರೇಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಕಟುವಾಗಿ ಠೀಕಿಸಿದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ- ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಸೋಲು ಅನುಭವಿಸಲಿದೆ. ಕಾಂಗ್ರೇಸ್ ಪಕ್ಷ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕು, ಏಕೆಂದರೆ ಅವರ ಹೇಳಿಕೆ ಅಧಿಕಾರದ ದುರಾಸೆಯನ್ನು ತೋರಿಸುತ್ತದೆ. ನಾನು ಮೊದಲೇ ಹೇಳಿದಂತೆ ರಾಜ್ಯದಲ್ಲಿ ಭಾರಿ ಪ್ರಮಾಣದ ಮತದಾನದಿಂದ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಮಾರ್ಚ 10 ರಂದು ಕಾಂಗ್ರೇಸ್ ಗೆಲುವು ಸೋಲು ಸ್ಪಷ್ಟವಾಗಲಿದೆ ಎಂದು ಸದಾನಂದ ತಾನಾವಡೆ ಹೇಳಿದರು.
ರಾಜ್ಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೇಸ್ ಪ್ರಮುಖ ದಿಗಂಬರ್ ಕಾಮತ್ ಮತ್ತು ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಚುನಾವಣೆಗೆ ಉತ್ತಮ ಪ್ರತಿಕ್ರಿಯೆ ಅಂದರೆ ಬಿಜೆಪಿ ಗೋವಾದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸದಾನಂದ ತಾನಾವಡೆ ಚವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಹಿಜಾಬ್ ವಿವಾದ, ಬೆಳಗಾವಿಯಲ್ಲಿ ಹೈಡ್ರಾಮಾ ; ಆರು ಮಂದಿ ಯುವಕರು ಪೊಲೀಸರ ವಶಕ್ಕೆ