Advertisement

ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನ

06:25 AM Dec 23, 2017 | |

ಬೆಂಗಳೂರು: ರಾಜ್ಯಕ್ಕೆ ಮಹದಾಯಿ ನೀರು ಬಿಡುಗಡೆ ಕುರಿತಂತೆ ಸರ್ಕಾರದಿಂದ ಸಾಧ್ಯವಾಗದ ಕೆಲಸವನ್ನು ಬಿಜೆಪಿ ಮಾಡಿ ಗೋವಾ ಮುಖ್ಯಮಂತ್ರಿ ಮನೋಹರ್‌ ಪರೀಕ್ಕರ್‌ ಅವರ ಮನವೊಲಿಸಿದರೂ ಕಾಂಗ್ರೆಸ್‌ ಸರ್ಕಾರ ಬಿಜೆಪಿಯವರ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಕಿಡಿ ಕಾರಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ 7.56 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಅವರ ಕೋರಿಕೆಗೆ ಗೋವಾ ಮುಖ್ಯಮಂತ್ರಿ ಸ್ಪಂದಿಸಿದ್ದು, ನೀರು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಬಿಜೆಪಿ ಉತ್ತರ ಕರ್ನಾಟಕದ ಪರ ಇರುವುದರಿಂದಲೇ ಈ ಕೆಲಸ ಮಾಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next