Advertisement

ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

02:36 PM Nov 09, 2022 | Team Udayavani |

ಬೆಳಗಾವಿ: ಹಿಂದೂ ಪದದ ಕುರಿತು ವಿವಾದಾತ್ಮಕ  ನೀಡದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದು, ನಗರದಲ್ಲಿ ಸತೀಶ ಜಾರಕಿಹೊಳಿ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರು ಆಕ್ರೊಶ ವ್ಯಕ್ತಪಡಿಸಿದರು.

Advertisement

ಶಾಸಕರಾದ ಅಭಯ ಪಾಟೀಲ, ಅನಿಲ್‌ ಬೆನಕೆ, ಮಹಾಂತೇಶ ದೊಡಗೌಡ್ರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಕೆಂಡಾಮಂಡಲರಾದರು. ಕೂಡಲೇ ಸತೀಶ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ನಗರದ ರಾಣಿ ಚನ್ನಮ್ಮಾ ವೃತ್ತದಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ಹಿಡಿದು ಧಿಕ್ಕಾರ ಕೂಗಿದರು.  ಬೆಳಗಾವಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ  ಸತೀಶ್ ಜಾರಕಿಹೊಳಿ ಹೇಳಿಕೆ ಹಿಂಪಡೆಯುವಂತೆ ಒತ್ತಾಯಿಸಿದರು. ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next