Advertisement

ಜ. 19ರಂದು ಮೂಡಬಿದಿರೆಯಲ್ಲಿ ಬಿಜೆಪಿ ಪ್ರತಿಭಟನೆ

03:45 AM Jan 17, 2017 | Team Udayavani |

ಮಂಗಳೂರು: ಬಿಜೆಪಿ ಮುಖಂಡ ವಲೇರಿಯನ್‌ ಕುಟಿನ್ಹೋ ಅವರ ಮೇಲೆ ಮೂಡಬಿದಿರೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಹಾಗೂ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದನ್ನು ಖಂಡಿಸಿ ಜ. 19ರಂದು ಬೆಳಗ್ಗೆ 10.30ಕ್ಕೆ ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಜಿಲ್ಲೆಯ ಪ್ರಮುಖ ನಾಯಕರು ಇದರಲ್ಲಿ ಭಾಗವಹಿಸುವರು ಎಂದರು. ಎಪಿಎಂಸಿ ಚುನಾವಣೆಯಲ್ಲಿ ಕಲ್ಲ ಮುಂಡ್ಕೂರು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದ, ಹಿರಿಯ ನಾಗರಿಕ ವಲೇರಿಯನ್‌ ಕುಟಿನ್ಹೋ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವದ ವೇಳೆ ತೀವ್ರ ಹಲ್ಲೆ ನಡೆಸಿದ್ದರು. ಪೊಲೀಸರು ಕಾಂಗ್ರೆಸ್‌ ನಾಯಕರು ಹಾಗೂ ಮೂಡಬಿದಿರೆ ಶಾಸಕರ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸಿಲ್ಲ. ಇದರ ಬದಲಿಗೆ ಅಂದುಸ್ಥಳದಲ್ಲಿ ಇರದ ಬಿಜೆಪಿಯ ಪ್ರಮುಖ ನಾಯಕರ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದರು.

ಪಕ್ಷದ ನಾಯಕರಾದ ರವಿಶಂಕರ ಮಿಜಾರು, ಕ್ಯಾ| ಬೃಜೇಶ್‌ ಚೌಟ, ಜಿತೇಂದ್ರ ಕೊಟ್ಟಾರಿ, ಜೊಯ್ಲಸ್‌ ಡಿ’ಸೋಜಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next