Advertisement

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ ಆರಂಭ

09:45 AM Jun 18, 2019 | Team Udayavani |

ಬೆಂಗಳೂರು : ಜಿಂದಾಲ್‌ಗೆ ಭೂಮಿ ನೀಡುವಮೈತ್ರಿ ಸರ್ಕಾರದ ನಿರ್ಧಾರ, ಬರ ನಿರ್ವಹಣೆ ವೈಫ‌ಲ್ಯ, ರೈತರ ಸಾಲಮನ್ನಾ ವಿಫ‌ಲ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ 2 ದಿನಗಳ ಕಾಲದ ಅಹೋರಾತ್ರಿ ಧರಣಿ ಯನ್ನು ಆರಂಭಿಸಿದೆ.

Advertisement

ಶುಕ್ರವಾರ ಬೆಳಗ್ಗೆ ನಗರದ ಆನಂದ್‌ ರಾವ್‌ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ಆರಂಭಿಸಲಾಗಿದೆ. ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಧರಣಿ ಪ್ರಾರಂಭಿಸಲಾಗಿದೆ.

ಧರಣಿಯಲ್ಲಿ ಬಿಜೆಪಿಯ 105 ಶಾಸಕರು , 25 ಸಂಸದರು ಮತ್ತುಪ್ರಮುಖ ಮುಖಂಡರು ಪಾಲ್ಗೊಳ್ಳುತ್ತಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಹಿಸಿದ್ದಾರೆ.

ಬಿಜೆಪಿ ನಾಯಕರಾದ ಆರ್‌.ಅಶೋಕ್‌, ಕೆ.ಎಸ್‌.ಈಶ್ವರಪ್ಪ, ಕೋಟಾ ಶ್ರೀನಿವಾಸಪೂಜಾರಿ,ಸಿ.ಟಿ.ರವಿ , ಅರವಿಂದ ಲಿಂಬಾವಳಿ ಸೇರಿದಂತೆ ಶಾಸಕರು ಭಾಗಿಯಾಗಿದ್ದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಪ್ರತಿಭಟನೆ ಮುಗಿದ ಬಳಿಕ ಜೂನ್‌ 16 ರಂದು ಗೃಹ ಕಚೇರಿಗೆ ಕೃಷ್ಣಾಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next