Advertisement

ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ

12:59 AM Feb 15, 2019 | Team Udayavani |

ಬೆಂಗಳೂರು: ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ರಾಜಧಾನಿ ಬೆಂಗಳೂರು ಸೇರಿ ಮಂಡ್ಯ, ಮೈಸೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾ ಜೆಡಿಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ಹೋಗುತ್ತಿರುವಾಗಲೇ ಪೊಲೀಸರು ಪ್ರತಿಭಟನಾಕಾರರನ್ನು ಅಡ್ಡಗಟ್ಟಿ ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಶಾಸಕರ ಮನೆಗೆ ಎ.ಮಂಜು ಭೇಟಿ: ಈ ನಡುವೆ, ಹಾಸನದಲ್ಲಿರುವ ಶಾಸಕ ಪ್ರೀತಂ ಗೌಡ ನಿವಾಸಕ್ಕೆ ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಎ.ಮಂಜು ಅವರು ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಎ.ಮಂಜು, ಜೆಡಿಎಸ್‌ ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಗಲಾಟೆ ಮಾಡಿ ಕಲ್ಲು ತೂರಿರುವುದು ಸಮ್ಮಿಶ್ರ ಸರ್ಕಾರದ ಪಾಲುದಾರ ಪûಾವಾಗಿರುವ ನಮಗೂ ಮುಜುಗರವನ್ನುಂಟು ಮಾಡಿದೆ. ಶಾಸಕರ ನಿವಾಸದ ಮೇಲೆ ದಾಳಿ ನಡೆಸುವುದು ಮತದಾರರಿಗೆ ಮಾಡಿದ ಅವಮಾನ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next