Advertisement

ಮುಖ್ಯಮಂತ್ರಿ ದಂಗೆ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

04:48 PM Sep 22, 2018 | |

ವಿಜಯಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಸರ್ಕಾರ ಕೆಡವಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ರಾಜ್ಯದ ಜನರನ್ನು ದಂಗೆ ಎಬ್ಬಿಸಲು ಕರೆ ನೀಡಿದ್ದರು. ಈ ಹೇಳಿಕೆ ವಿರೋಧಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಶುಕ್ರವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ಬರಿ ಮೂವತ್ತು ಮತ್ತೂಂದು ಶಾಸಕರನ್ನು ಪಡೆದು ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿ ಕಾರಕ್ಕೆ ಬಂದಿರುವ ಸಿಎಂ ಕುಮಾರಸ್ವಾಮಿ ಮೈಮೇಲೆ ಪ್ರಜ್ಞೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಅಧಿಕಾರದ ಮದದಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ. ಸಾಲದು ಎಂಬಂತೆ ರಾಜ್ಯದ ಜನರ ರಕ್ಷಣೆ ಮಾಡಬೇಕಾದ ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ, ದಂಗೆ ಎಬ್ಬಿಸುವ ಮಾತನಾಡಿ ಸಂವಿಧಾನ ವಿರೋಧಿ ನೀತಿ ಅನುರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಮತ್ತೂಂದೆಡೆ ಕಾಂಗ್ರೆಸ್‌-ಜೆಡಿಎಸ್‌ ಗೂಂಡಾಗಳನ್ನು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಮನೆಗೆ ಕಳುಹಿಸಿ ಗಲಾಟೆ ಮಾಡಿಸಿದ್ದಾರೆ. 

ವಿನಾಕಾರಣ ನಮ್ಮ ಶಾಸಕರ ಬಗ್ಗೆ ಮತ್ತು ಪಕ್ಷದ ಪದಾಧಿಕಾರಿಗಳ ಬಗ್ಗೆ ಟೀಕೆ ಮಾಡುತ್ತಿರುವ ಅವರ ವರ್ತನೆ
ಅವಲೋಕಿಸಿದರೆ ಅಪವಿತ್ರ ಮೈತ್ರಿ ಸರ್ಕಾರ ಬಹಳ ದಿನ ಆಯುಷ್ಯ ಇಲ್ಲ ಎಂಬುದು ಮನವರಿಕೆ ಆಗುತ್ತಿದೆ. ಇದರಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಸರ್ಕಾರ ಉಳಿಯುವುದಿಲ್ಲ, ಬರುವ ದಿನಗಳಲ್ಲಿ ಕುಮಾರಸ್ವಾಮಿ ಅವರು ಇಂತಹ ಹೀನ ಕೃತ್ಯಗಳನ್ನು ಮಾಡುವುದನ್ನು ಬಿಡದಿದ್ದರೆ ಅವರ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕಾಂತ ಬಗಲಿ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಾಯಬೇಕಾದ
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ಅವರೇ ಖುದ್ದು ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ದೂರಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವರುದ್ರ ಬಾಗಲಕೋಟ, ಸಂಗರಾಜ ದೇಸಾಯಿ, ವಿವೇಕ್‌ ಡಬ್ಬಿ, ಪ್ರಕಾಶ ಅಕಲಕೋಟ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್‌ ಜಾಧವ, ಅಶೋಕ ಬೆಲ್ಲದ, ಎಂ.ಎಸ್‌. ಕರಡಿ, ಶಿವಾನಂದ ಭುಂಯಾರ, ಉಮೇಶ ವಂದಾಲ, ಡಾ| ಗೋಪಾಲ ಕಾರಜೋಳ, ಮಲ್ಲಮ್ಮ ಜೋಗುರ, ಭಾರತಿ ಭುಂಯಾರ, ಗೀತಾ ಕುಗನೂರ, ಶಿವರುದ್ರ ಬಾಗಲಕೋಟ, ಮಳುಗೌಡ ಪಟೀಲ, ರಾಜು ಬಿರಾದಾರ, ಶೀತಲಕುಮಾರ ಒಗಿ, ಬಾಬು ಶಿರಸ್ಯಾಡ, ಪಾಪುಸಿಂಗ್‌ ರಜಪೂತ, ರಮೇಶ ಪಡಸಲಗಿ, ಶ್ರೀಕಾಂತ ರಾಠೊಡ, ಕೃಷ್ಣಾ ಗುನ್ನಾಳಕರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next