Advertisement

ಸೆಗಣಿ, ಟೊಮೆಟೋ ಎಸೆದು ಬಿಜೆಪಿ ಪ್ರತಿಭಟನೆ!

09:12 AM Jan 30, 2018 | |

ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಡಳಿತ ಭವನದತ್ತ ಸಗಣಿ, ಟೊಮೆಟೋ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲಾಧಿಕಾರಿ ಕಚೇರಿಯತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.

Advertisement

ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಮೆಕ್ಕೆ ಜೋಳ ಖರೀದಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು. ಆಗ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಪೊಲೀಸರು ಹರಸಾಹಸ ಪಟ್ಟರು. ಈ ವೇಳೆ ನಡೆದ ನೂಕಾಟದಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಕಣ್ಣಿಗೆ ಪೊಲೀಸರ ಲಾಠಿ ತಗುಲಿ ಗಾಯವಾಯಿತು. ಕಾರ್ಯಕರ್ತರು ಎಸೆದ ಸೆಗಣಿ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳಿಗೂ
ಸಿಡಿಯಿತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೇರಿ 70ಕ್ಕೂ ಹೆಚ್ಚು ಜನರನ್ನು ಬಂಧಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next