Advertisement

ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟ ಬಿಜೆಪಿ; ಕೆಆರ್ ಪೇಟೆಯಲ್ಲಿ ಮೊದಲ ಬಾರಿಗೆ ಅರಳಿದ ಕಮಲ

10:41 AM Dec 13, 2019 | Nagendra Trasi |

ಬೆಂಗಳೂರು/ಮಂಡ್ಯ: ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದ್ದ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಪರಾಜಯಗೊಳ್ಳುವ ಮೂಲಕ ಹೀನಾಯ ಸೋಲು ಕಂಡಿದ್ದರೆ, ಮತ್ತೊಂದೆಡೆ ಮಂಡ್ಯದ ಲೋಕಸಭಾ ಕ್ಷೇತ್ರದ ಜೆಡಿಎಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನು ತೆರೆದಂತಾಗಿದೆ.

Advertisement

ಮಂಡ್ಯಲೋಕಸಭಾ ಕ್ಷೇತ್ರದ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ 9,728 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ ಗೌಡ ಜೆಡಿಎಸ್ ನಿಂದ ಅಖಾಡಕ್ಕಿಳಿದಿದ್ದು, ಗೆಲವು ಸಾಧಿಸಿದ್ದರು.

ಕೆಆರ್ ಪೇಟೆ ಕ್ಷೇತ್ರದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ಬಿಎಲ್ ದೇವರಾಜು ಅವರನ್ನು ನಾರಾಯಣ ಗೌಡ 9 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next