Advertisement
ಅಲ್ಲದೆ, ಮಹದಾಯಿ ವಿವಾದದ ಕುರಿತು ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸುವುದರ ಜತೆಗೆ, ಈ ಹಿಂದೆ ಮಹದಾಯಿ ಕುರಿತು ಸೋನಿಯಾ ಗಾಂಧಿ ಅವರು ಗೋವಾ ನೆಲದಲ್ಲಿ ನಿಂತು ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.
Related Articles
Advertisement
ಮಹದಾಯಿ- ನಿಲುವು ತಿಳಿಸಿ:ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಎರಡು ಸುತ್ತಿನ ಪ್ರವಾಸ ಮಾಡಿದರೂ ಮಹದಾಯಿ ವಿಚಾರದಲ್ಲಿ ಚಕಾರ ಎತ್ತಿಲ್ಲ. ಹಿಂದೆ ಸೋನಿಯಾ ಗಾಂಧಿ ಅವರು ಗೋವಾ ಚುನಾವಣೆ ವೇಳೆ ಮಹದಾಯಿ ನದಿಯಿಂದ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಿಲುವೇನು? ಸೋನಿಯಾ ಹೇಳಿಕೆಗೆ ಕ್ಷಮೆ ಯಾಚಿಸುತ್ತೀರಾ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ ಆರ್.ಅಶೋಕ್, ಕ್ಷಮೆ ಯಾಚಿಸುವಂತೆ ಆಗ್ರಹಿಸಿದರು. ಕಾಂಗ್ರೆಸ್ಗೆ ಬುದ್ಧಿ ಹೇಳಲಿಲ್ಲ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗೂಂಡಾ ನಡವಳಿಕೆ ಬಗ್ಗೆ ರಾಹುಲ್ ಗಾಂಧಿ ಅವರು ತಮ್ಮ ಎರಡು ಸುತ್ತಿನ ಪ್ರವಾಸದಲ್ಲೂ ಪ್ರಸ್ತಾಪಿಸಿಲ್ಲ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಹೇಳಿಲ್ಲ. ಕೇವಲ ಪ್ರಧಾನಿ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ಕಾಲ ಕಳೆದಿದ್ದಾರೆ. ಈ ರೀತಿ ಉಡಾಫೆ ಮಾತನಾಡಿ ಜನರನ್ನು ತಪ್ಪುಗಾರಿಗೆ ಎಳೆಯುವುದನ್ನು ಬಿಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬುದ್ಧಿ ಕಲಿಸಲಿದ್ದಾರೆ ಎಂದರು.