Advertisement

ಪಕ್ಷಕ್ಕೆ ದುಡಿದವರನ್ನು ಗುರುತಿಸುವ ಬಿಜೆಪಿ

03:53 PM Aug 04, 2022 | Team Udayavani |

ಅಫಜಲಪುರ: ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡುವ ಪಕ್ಷ ಬಿಜೆಪಿಯಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಹೇಳಿದರು.

Advertisement

ತಾಲೂಕಿನ ದೇವಲ ಗಾಣಗಾಪೂರದ ಅಶೋಕ ಗ್ರಾಂಡ್‌ ಹೋಟೆಲ್‌ನಲ್ಲಿ ನಡೆದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿಯಾಗಿದ್ದಾರೆ. ಕಾರ್ಯಕರ್ತರ ಬಲದಿಂದಲೇ ಇಂದು ದೇಶದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದಿದೆ ಎಂದರು.

ಮಂಡಲ ಅಧ್ಯಕ್ಷ ಶೈಲೇಶ ಗುಣಾರಿ, ಜಿಪಂ ಮಾಜಿ ಅಧ್ಯಕ್ಷ ನಿತೀನ್‌ ಗುತ್ತೇದಾರ, ಮುಖಂಡರಾದ ಈಶ್ವರಸಿಂಗ್‌ ಠಾಕೂರ, ಸೂರ್ಯಕಾಂತ ಡೋಣಿ, ಚಂದಮ್ಮ ಪಾಟೀಲ್‌, ಅಶೋಕ ಬಗಲಿ, ನಾಗಪ್ಪ ಕೊಳ್ಳಿ, ವಿಶ್ವನಾಥ ರೇವೂರ, ಭೀಮರಾವ್‌ ಕಲಶೆಟ್ಟಿ, ಸುಭಾಷ ಪ್ಯಾಟಿ, ಅಪ್ಪಾಶಾ ಶ್ರೀಗಿರಿ, ರಮೇಶ ಬಾಕೆ, ಸಿದ್ಧುಗೌಡ ಪಾಟೀಲ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next