Advertisement

Telangana Election: ಶಾಸಕ ಟಿ ರಾಜಾ ಸಿಂಗ್ ಅಮಾನತು ಹಿಂಪಡೆದ ಬಿಜೆಪಿ

12:40 PM Oct 22, 2023 | Team Udayavani |

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ಹಿಂಪಡೆದಿದೆ. ಪಕ್ಷವು ನೀಡಿದ ಶೋಕಾಸ್ ನೋಟಿಸ್‌ ಗೆ ಅವರು ನೀಡಿದ ಉತ್ತರಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಕಳೆದ ಆಗಸ್ಟ್‌ ನಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವರು ಮಾಡಿದ ಹೇಳಿಕೆಯ ಕಾರಣದಿಂದ ವಿವಾದ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು.

” ಪಕ್ಷದ ಕೇಂದ್ರ ಶಿಸ್ತು ಸಮಿತಿಯು ನಿಮಗೆ ನೀಡಿದೆ ಶೋಕಾಸ್ ನೋಟಿಸ್ ಗೆ ನಿಮ್ಮ ಉತ್ತರ ಮತ್ತು ವಿವರಣೆಯನ್ನು ಸಮಿತಿಯು ಪರಿಗಣಿಸಿದೆ. ನಿಮ್ಮ ಉತ್ತರವನ್ನು ಆಧರಿಸಿ ಸಮಿತಿಯು ಈ ಕೂಡಲೇ ನಿಮ್ಮ ಅಮಾನತು ಹಿಂಪಡೆಯಲು ನಿರ್ಧರಿಸಲಾಗಿದೆ” ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅವರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ, ಬಿಜೆಪಿ ಅವರನ್ನು ಪುನಃ ಕರೆಸುತ್ತದೆ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೋಶಾಮಹಲ್ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುತ್ತದೆ ಎಂದು ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಹೆಚ್ಚುವರಿಯಾಗಿ, ಅವರು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಉದ್ದೇಶ ಹೊಂದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು.

Advertisement

ಈ ಬಾರಿಯ ವಿಧಾನಸಭೆ ಚುನಾವಣೆಯು ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 2018 ರ ಹಿಂದಿನ ಅಸೆಂಬ್ಲಿ ಚುನಾವಣೆಯಲ್ಲಿ, ಬಿಆರ್ ಎಸ್ 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು, ಒಟ್ಟು ಮತಗಳ ಶೇಕಡಾ 47.4 ರಷ್ಟು ಗಳಿಸಿತು. ಕಾಂಗ್ರೆಸ್ 19 ಸ್ಥಾನಗಳೊಂದಿಗೆ 28.7 ಶೇಕಡಾ ಮತಗಳನ್ನು ಗಳಿಸಿ ಎರಡನೇ ಸ್ಥಾನವನ್ನು ಗಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next