Advertisement

BJP, RSS ರಾಜಭವನವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ: ಚಲುವರಾಯಸ್ವಾಮಿ

12:38 PM Aug 21, 2024 | Team Udayavani |

ಚಿಕ್ಕಬಳ್ಳಾಪುರ: ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಆರ್ ಎಸ್ ಎಸ್ ರಾಜ ಭವನವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ(ಆ 21) ಟೀಕಿಸಿದ್ದಾರೆ.

Advertisement

ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಬಿಜೆಪಿ ರಾಜಕಾರಣಕ್ಕೆ ಇಡಿ, ಐಟಿ, ಸಿಬಿಐ ಮತ್ತಿತರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಈಗ ರಾಜಭವನವನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಏನೂ ನಡೆಯದೇ ನಮ್ಮ ಸಿಎಂ ವಿರುದ್ದ ತನಿಖೆಗೆ ಆದೇಶಿಸಿರುವ ರಾಜ್ಯಪಾಲರು, ಕುಮಾರಸ್ವಾಮಿ ವಿರುದ್ದ ಸಾಕ್ಷಿಗಳಿದ್ದರೂ ಪ್ರಾಸಿಕ್ಯೂಷನ್ ಗೆ ಅನುಮತಿ ಆದೇಶ ನೀಡದೇ ರಾಜಕಾರಣ ಮಾಡಿದ್ದಾರೆ ಎಂದು ದೂರಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಗಣಿ ಅಕ್ರಮದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು ಮರು ಅರ್ಜಿ ಸಲ್ಲಿರುವ ಕುರಿತು ಪ್ರತಿಕ್ರಿಯಿಸಿ ‘ಈ ವಿಚಾರದಲ್ಲಿ ಕೂಡ ರಾಜ್ಯಪಾಲರು ತಾರತಾಮ್ಯ ತೋರುತ್ತಿದ್ದಾರೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next