Advertisement

ವಾಜಪೇಯಿ ಸಮಾಧಿಗೆ ಭೇಟಿ; ರಾಹುಲ್ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕೆ

07:09 PM Dec 26, 2022 | Team Udayavani |

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ಕಾಂಗ್ರೆಸ್ ಮುಖ್ಯಸ್ಥರ ಕಚೇರಿಗೆ ಹೊಂದಿಕೊಂಡಿರುವ ನಾಯಕರೊಬ್ಬರು ಮಾಡಿದ ಅಸಹ್ಯಕರ ಹೇಳಿಕೆಗಳ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

Advertisement

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಂಯೋಜಕರಾಗಿರುವ ಗೌರವ್ ಪಾಂಡಿ ಅವರು ವಾಜಪೇಯಿ ಅವರು ಬ್ರಿಟಿಷರ ಪರ ನಿಂತಿದ್ದರು ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು.ನಂತರ ಅದನ್ನು ಡಿಲೀಟ್ ಮಾಡಿದ್ದರು. ವಾಜಪೇಯಿ ಅವರ ಸ್ಮಾರಕದಲ್ಲಿ ಗೌರವ ಸಲ್ಲಿಸಲು ತೆರಳಿ ರಾಹುಲ್ ಗಾಂಧಿ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದರಿಂದ ಅವರು ಅದನ್ನು ಅಳಿಸಿದ್ದರು, ಆದರೆ ಪಕ್ಷದ ನಾಯಕರು ಮಾಜಿ ಪ್ರಧಾನಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿ ಈ ಕುರಿತು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಾಂಡಿ ಅವರ ಹೇಳಿಕೆಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ, ಇಲ್ಲದಿದ್ದರೆ ಪಾಂಡಿ ಅವರ ಮಾತುಗಳು ರಾಹುಲ್ ಗಾಂಧಿಯವರ ಆಲೋಚನೆಗಳು ಎಂದು ನಂಬಬೇಕಾಗುತ್ತದೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಅವರ ಜನ್ಮದಿನವಾದ ಭಾನುವಾರ ಸೇರಿದಂತೆ ಹಲವಾರು ಮಾಜಿ ಪ್ರಧಾನಿಗಳ ಸಮಾಧಿಗೆ ಭೇಟಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next