Advertisement

ಡಾ.ಶಂಕರೇಗೌಡರಿಗೆ ಬಿಜೆಪಿ ಗಾಳ

10:25 AM Feb 03, 2018 | Team Udayavani |

ಮಂಡ್ಯ: ಮುಂದಿನ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ನ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಡಾ.ಎಚ್‌.ಸಿ. ಶಂಕರೇಗೌಡರಿಗೆ ಬಿಜೆಪಿ ಗಾಳ ಹಾಕಿದೆ. ಶುಕ್ರವಾರ ಬೆಳಗ್ಗೆಯೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ಅವರು
“ಐದು ರೂ. ಡಾಕ್ಟರ್‌’ ಎಂದೇ ಖ್ಯಾತರಾದ ಶಂಕರೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರಲ್ಲದೆ, ಪಕ್ಷ ಸೇರುವಂತೆ ಮುಕ್ತ ಆಹ್ವಾನ ನೀಡಿದರು.

Advertisement

ಆದರೆ, ಬಿಜೆಪಿ ಸೇರುವ ಬಗ್ಗೆ ಡಾ.ಶಂಕರೇಗೌಡರು ಯಾವುದೇ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಬಿಜೆಪಿ ಸೇರುವ ಮನಸ್ಸು ಮಾಡಿದರೆ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ದೊರಕಿಸಿಕೊಡುವ ಭರವಸೆಯನ್ನೂ ಯೋಗೇಶ್ವರ್‌ ನೀಡಿದ್ದಾರೆ ಎಂದೂ ತಿಳಿದು ಬಂದಿದೆ. ಯೋಗೇಶ್ವರ್‌ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಡಾ.ಶಂಕರೇಗೌಡ, ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಡವಿದೆ.  ಅಭಿಮಾನಿಗಳು, ಬೆಂಬಲಿಗರು ನನಗೆ ಬೆಂಬಲವಾಗಿ ನಿಂತಿದ್ದಾರೆ. ನನ್ನ ಮಾತೃಪಕ್ಷ ಜೆಡಿಎಸ್‌. ಅಲ್ಲೇ ರಾಜಕೀಯ ಬೆಳವಣಿಗೆ ಕಂಡುಕೊಂಡಿದ್ದೇನೆ. ಪಕ್ಷ ತೊರೆಯುವ ಬಗ್ಗೆ ಇನ್ನೂ ಚಿಂತನೆ ಮಾಡಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next