Advertisement

ಬಿಜೆಪಿಯಿಂದ ಥಟ್‌ ಅಂತ ಹೇಳಿ ಅಭಿಯಾನ

08:03 PM Jan 12, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನಡೆದ ಹಳೆ ಪ್ರಕರಣಗಳನ್ನು ಮತ್ತೆ ಕೆದಕಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ  ಥಟ್‌ ಅಂತ ಹೇಳಿ ಅಭಿಯಾನ ಪ್ರಾರಂಭಿಸಿದೆ.

Advertisement

ಐಎಎಸ್‌ ಅಧಿಕಾರಿ ಡಿ.ಕೆ. ರವಿ ಹಾಗೂ ಡಿವೈಎಸ್‌ಪಿ ಎಂ.ಕೆ. ಗಣಪತಿ ಎಂಬಿಬ್ಬರು  ದಕ್ಷ ಅಧಿಕಾರಿಗಳ ಸಾವಿಗೆ ಕಾರಣ ಯಾರು ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ. ಇದಕ್ಕೆ ಉತ್ತರದ ಆಯ್ಕೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಜಿ ಸಚಿವ ಕೆ.ಜೆ.ಜಾರ್ಜ್‌, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರ ಹೆಸರನ್ನು ನೀಡಿದೆ.

ಅದೇ ರೀತಿ ಕಾಂಗ್ರೆಸ್‌ ಬಸ್‌ ಯಾತ್ರೆ ಬಗ್ಗೆಯೂ ಜಾಲತಾಣದಲ್ಲಿ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಓಡುವ ಬಸ್ಸಲ್ಲ, ತಳ್ಳುವ ಬಸ್ಸು ಎಂದು ಟೀಕಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next