Advertisement

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

07:17 PM Apr 19, 2024 | Team Udayavani |

ದಾವಣಗೆರೆ :ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ’ಎಲ್ಲ ಕ್ಷೇತ್ರದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣ ಇದೆ. ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ. ಘೋಷಣೆ ಮಾತ್ರ ಬಾಕಿ ಇದೆ’ ಎಂದು ವಿಶ್ವಾಸದ ನುಡಿಗಳನ್ನಾಡಿದರು.

‘ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಬೇಕು. ಭಾರತ ಮತ್ತೊಮ್ಮೆ ವಿಶ್ವಗುರು ಆಗಬೇಕು ಎಂಬ ಕಾರಣಕ್ಕೆ ದೇಶ, ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಜನರು ಸ್ವಾಗತಿಸುತ್ತಿದ್ದಾರೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next