ಬೆಂಗಳೂರು: ”ಈಶ್ವರಪ್ಪ ಹಿರಿಯ ನಾಯಕರು. ಯಡಿಯೂರಪ್ಪ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ಕುಮಾರ್ ಅವರೊಂದಿಗೆ ಪಕ್ಷವನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ “ಇಡೀ ದೇಶವು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸುತ್ತಿರುವಾಗ, ದಯವಿಟ್ಟು ನಿಮ್ಮ ಅಸಮಾಧಾನವನ್ನು ಬದಿಗಿಟ್ಟು ಪಕ್ಷವನ್ನು ಬಲಪಡಿಸಲು ಕೈ ಜೋಡಿಸಿ. ಇನ್ನೂ ಕಾಲ ಮಿಂಚಿಲ್ಲ ಎಂದು ಸಲಹೆ ನೀಡಿದ್ದಾರೆ.
”ನಮ್ಮ ಪಕ್ಷದ ಕಾರ್ಯಕರ್ತರ ಪರವಾಗಿ ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ. ಪ್ರತಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಸಾಧ್ಯತೆ ಯಾವಾಗಲೂ ಇರುತ್ತದೆ. ನಿಮಗೆ ಯಾವುದೇ ಕುಂದುಕೊರತೆಗಳಿದ್ದರೆ, ನಮ್ಮ ದೆಹಲಿಯ ನಾಯಕರನ್ನು ಭೇಟಿ ಮಾಡಿ ಮತ್ತು ನಿಮ್ಮ ಸಮಸ್ಯೆಯನ್ನು ಪರಿಹರಿಸಿ. ನಾವು ನಿಮ್ಮೊಂದಿಗಿದ್ದೇವೆ ಮತ್ತು ನೀವೂ ನಮ್ಮ ಬಿಜೆಪಿ ಕಾರ್ಯಕರ್ತರೊಂದಿಗೆ ಇರಬೇಕೆಂದು ನಾವು ಬಯಸುತ್ತೇವೆ. ಈಶ್ವರಪ್ಪ ಅವರು ರಾಘವೇಂದ್ರ ಅವರನ್ನು ಬೆಂಬಲಿಸಬೇಕೆಂದು ನಾನು ಬಯಸುತ್ತೇನೆ” ಎಂದು ಮನವಿ ಮಾಡಿದರು.
ಚುನಾವಣ ಪ್ರಚಾರದ ವೇಳೆ ಈಶ್ವರಪ್ಪ ಅವರು ಮೋದಿಯವರ ಛಾಯಾಚಿತ್ರಗಳನ್ನು ಬಳಸಿದ ಬಗ್ಗೆ ಪ್ರತಿಕ್ರಿಯಿಸಲು ವಿಜಯೇಂದ್ರ ನಿರಾಕರಿಸಿದರು. ನಾನು ಈಶ್ವರಪ್ಪ ಅವರೊಂದಿಗೆ ಮತ್ತು ಬಿಜೆಪಿ ಕೇಂದ್ರ ನಾಯಕರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.
ಶಿವಮೊಗ್ಗದಾದ್ಯಂತ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಕನಿಷ್ಠ ಎರಡು ಲಕ್ಷ ಮತಗಳ ಅಂತರದಿಂದ ರಾಘವೇಂದ್ರ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ನಾಯಕರೊಂದಿಗೆ ಮಾತನಾಡುವಂತೆ ವಿಜಯೇಂದ್ರ ಮನವಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ’ ಬಿಜೆಪಿ ಕೇಂದ್ರ ನಾಯಕರು ಮಾತನಾಡುತ್ತಾರೆ ಎಂಬ ವಿಶ್ವಾಸವಿದ್ದರೆ, ನಾನು ಚುನಾವಣೆಗೆ ಸ್ಪರ್ಧಿಸಬಾರದು ಎಂದು ನೀವು ಬಯಸಿದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ’ ಎಂದು ಸವಾಲೆಸೆದಿದ್ದರು.
“ಕೇವಲ ಒಂದು ಕುಟುಂಬವು ಎಲ್ಲಾ ಪ್ರಮುಖ ಹುದ್ದೆಗಳನ್ನು ನಿಯಂತ್ರಿಸುತ್ತಿದೆ. ನಾನು ದೆಹಲಿ ನಾಯಕರೊಂದಿಗೆ ಏಕೆ ಮಾತನಾಡಬೇಕೆಂದು ನೀವು ಬಯಸುತ್ತೀರಿ?” ಎಂದು ಈಶ್ವರಪ್ಪ ಅವರು ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧ ಕಿಡಿ ಕಾರಿದ್ದರು.