Advertisement

ಅ. 7ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

09:30 PM Sep 18, 2022 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಅಕ್ಟೋಬರ್‌ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ.

Advertisement

ಮುಂಬರುವ ವಿಧಾನಸಭಾ ಚುನಾವಣೆ ಕಾರ್ಯಕಾರಿಣಿ ಸಭೆಯ ಪ್ರಮುಖ ಚರ್ಚಾ ವಿಷಯವಾಗಿರಲಿದೆ ಎಂದು ಹೇಳಲಾಗಿದೆ.

ಇದಲ್ಲದೇ ಪಕ್ಷ ಸಂಘಟನೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಪರಾಮರ್ಶೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ.

ಜನಸ್ಪಂದನಾ ಸಮಾವೇಶದ ಹಿನ್ನೆಲೆಯಲ್ಲಿ ಈ ಹಿಂದೆ ನಿಗದಿಯಾಗಿದ್ದ ರಾಜ್ಯ ಕಾರ್ಯಕಾರಿಣಿ ಮುಂದೂಡಲ್ಪಟ್ಟಿತ್ತು.

ಇದೀಗ ಅ.7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next