Advertisement

ವೈರಸ್ ಗೆ ಜಾತಿ, ಮತ ಇಲ್ಲ, ಪಾದರಾಯನಪುರದಲ್ಲಿ ಆಗಿದ್ದು ರಾಷ್ಟ್ರ ವಿರೋಧಿ ಕೃತ್ಯ: ನಳೀನ್

03:54 PM Apr 20, 2020 | keerthan |

ಮಂಗಳೂರು : ವೈರಸ್ ಗೆ ಜಾತಿ, ಮತ ಇಲ್ಲ. ಕೋವಿಡ್19 ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಪಾದರಾಯನಪುರದಲ್ಲಿ ಆಗಿದ್ದು ರಾಷ್ಟ್ರ ವಿರೋಧಿ ಕೃತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ಮಂಗಳೂರಿನಲ್ಲಿ ಮಾತನಾಡಿದ ಅವರು ಪಾದರಾಯನಪುರದಲ್ಲಿ ಕಾನೂನು ಭಂಜಕರಿಂದ ಘಟನೆ ನಡೆದಿದೆ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ‌ ಕುರಿತು ನಾನು ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ. ಪಾದರಾಯನಪುರದಲ್ಲಿ ಇನ್ನು ಮುಂದೆ ಅಂತಹ ಘಟನೆ ನಡೆಯಬಾರದು ಎಂದಿದ್ದಾರೆ.

ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ, ಉತ್ತರ ಪ್ರದೇಶ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ಹೋಗಿದ್ದು ಖಂಡನೀಯ, ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next