Advertisement

ಪಂಚತಾರಾ ಹೊಟೇಲ್‌ನಲ್ಲಿ ಸಿಎಂ ವಾಸ್ತವ್ಯ: ಬಿಜೆಪಿ ಆರೋಪ

05:33 AM Jan 07, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪಂಚತಾರಾ ಹೊಟೇಲ್ನಲ್ಲಿ ಹೆಚ್ಚಾಗಿ ವಾಸ್ತವ್ಯ ಹೂಡುತ್ತಿದ್ದಾರೆ. ಅಲ್ಲಿ ಅನೇಕ ವ್ಯವಹಾರಗಳನ್ನು ನಡೆಸುತ್ತಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಆರೋಪಿಸಿದರು.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರವಿವಾರ ನಡೆದ ಬಿಜೆಪಿ ಯುವಮೋರ್ಚಾದ “ವಿಜಯ ಲಕ್ಷ್ಯ- 2019’ರ ಯೋಜನೆ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ನಡೆಯುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿದೇಶಕ್ಕೆ ಪ್ರವಾಸ ಹೋಗುತ್ತಾರೆ. ಸರಕಾರ ನಡೆಸುವ ಆಸಕ್ತಿ  ಅವರಿಗೆ ಇಲ್ಲದಂತಾಗಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಜವಹಾರ್‌ಲಾಲ್‌ ನೆಹರೂ ಅವರಿಂದಲೇ ದೇಶದಲ್ಲಿ ಭ್ರಷ್ಟಾಚಾರ ಆರಂಭವಾಗಿದ್ದು, ಕಾಂಗ್ರೆಸ್‌ಗೆ ಭ್ರಷ್ಟ ಇತಿಹಾಸವಿದೆ. ಸ್ವಾಮಿ ವಿವೇಕಾನಂದ ಮತ್ತು ಭಗತ್‌ ಸಿಂಗ್‌ ದೇಶದ ಚರಿತ್ರೆ ಬದಲಾಯಿಸಿದ್ದಾರೆ. ಆದರೆ ಕಾಂಗ್ರೆಸ್‌ನ ಆಡಳಿತಾವಧಿಯಲ್ಲಿ ನೆಹರೂ ಅವರಿಂದ ರಾಹುಲ್‌ ಗಾಂಧಿವರೆಗೂ ದೇಶದ ಸ್ಥಿತಿ ಹೀನಾಯವಾಯಿತು. ಪ್ರಜಾಪ್ರಭುತ್ವ ನೆಲಸಮಗೊಳಿಸಲು ಕಾಂಗ್ರೆಸ್‌ ಮುಂದಾಗಿದೆ ಎಂದು ದೂರಿದರು.

ರಾಜ್ಯ ಯುವ ಮೋರ್ಚಾ ಪ್ರಭಾರಿ ಮಧುಕೇಶವ ದೇಸಾಯಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 14 ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವ ಸರಕಾರ ಆಡಳಿತಕ್ಕೆ ತರಬೇಕು. ಯುವ ಮೋರ್ಚಾದ ವತಿಯಿಂದ ನಡೆಯುವ ರ್ಯಾಲಿಯನ್ನು ಯಶಸ್ವಿಗೊಳ್ಳಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next