Advertisement

ಚಂಪಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ

11:18 AM Nov 26, 2017 | Team Udayavani |

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಅವರು ರಾಜಕೀಯ ವಿಚಾರ ಪ್ರಸ್ತಾಪಿಸಿದ್ದ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಕನ್ನಡ ನಾಡು, ನುಡಿಯ ಏಳಿಗೆ ಬಗ್ಗೆ ಚರ್ಚೆ ನಡೆಯಬೇಕಿದ್ದ ಸಮ್ಮೇಳನದ ವೇದಿಕೆಯನ್ನು ಚಂಪಾ ರಾಜಕೀಯ ವೇದಿಕೆಯಾಗಿ ಬಳಸಿಕೊಂಡಿದ್ದು ದುರದೃಷ್ಟಕರ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ’ ಎಂದು ಹೇಳಿದರು.

ಕನ್ನಡ ಶಾಲೆಗಳು ಮುಚ್ಚಿ ಹೋಗುತ್ತಿರುವ ಬಗ್ಗೆ, ಕನ್ನಡವನ್ನು ಉಳಿಸಿ ಬೆಳೆಸುವ ಬಗ್ಗೆ ಸಾಹಿತ್ಯ ಸಮ್ಮೇಳನ ಚರ್ಚಾ ವೇದಿಕೆಯಾಗಬೇಕಿತ್ತು. ಆದರೆ,  ರಾಜಕೀಯ ವೇದಿಕೆಯಾಗಿ ಬಳಕೆಯಾಗಿದೆ. ಚಂಪಾ ಅವರು ಒಂದು ಪಕ್ಷದ ಪರವಾಗಿ ಹಾಗೂ  ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವುದು ಸರಿಯಲ್ಲ. ಯಾರೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

“ಚಂಪಾ ಮಾತನ್ನು  ಹುಬ್ಬಳ್ಳಿಯಲ್ಲೇ ಜನ ಕೇಳುವುದಿಲ್ಲ. ಹೀಗಿರುವಾಗ ರಾಜ್ಯದ ಜನ ಹೇಗೆ ಕೇಳುತ್ತಾರೆ’ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.  ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತ್ರ ಈ ವಿಚಾರದಲ್ಲಿ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ. ಸಮ್ಮೇಳನಾಧ್ಯಕ್ಷ$ಚಂದ್ರಶೇಖರ ಪಾಟೀಲರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next