Advertisement

ರೈತರ ಬಂದ್‌ಗೆ ಬಿಜೆಪಿ ಬೆಂಬಲ: ಶ್ರೀರಾಮುಲು

06:30 AM May 28, 2018 | |

ರಾಯಚೂರು: ರೈತರ ಸಂಪೂರ್ಣ ಸಾಲಮನ್ನಾ ಮಾಡದ ಕ್ರಮ ಖಂಡಿಸಿ ರಾಜ್ಯದಲ್ಲಿ ರೈತರು ಕರ್ನಾಟಕ ಬಂದ್‌ಗೆ ಮುಂದಾಗಿದ್ದು, ಬಿಜೆಪಿ ಕೂಡ ಬಂದ್‌ ಯಶಸ್ಸಿಗೆ ಕೈ ಜೋಡಿಸಲಿದೆ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಕೂಡಲೇ ಸಾಲಮನ್ನಾ ಮಾಡಬೇಕೆಂದು ಬಿಜೆಪಿ ನಾಯಕರಾದ ಬಿ.ಎಸ್‌.ಯಡಿಯೂರಪ್ಪ, ಅನಂತಕುಮಾರ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಸೋಮವಾರ ಕರ್ನಾಟಕ ಬಂದ್‌ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಬಂದ್‌ ಆಚರಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗುತ್ತಿದೆ. ಆದರೆ, ನಾವು ಎಲ್ಲದಕ್ಕೂ ಸಿದ್ಧರಾಗಿಯೇ ಹೋರಾಟಕ್ಕೆ ಮುಂದಾಗಿದ್ದೇವೆ. ಮಹಾ ಎಂದರೆ ಬಂಧಿ ಸುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿ ಏನಿಲ್ಲವಲ್ಲ ಎಂದರು.

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ, ಈಗ ಕಾಂಗ್ರೆಸ್‌ನವರನ್ನು ಕೇಳಬೇಕು ಎನ್ನುತ್ತಿದ್ದಾರೆ. ಬೇಷರತ್‌ ಬೆಂಬಲ ನೀಡುತ್ತೇವೆ ಎಂದಿದ್ದ ಕಾಂಗ್ರೆಸ್‌ ಈಗ ಎಲ್ಲದಕ್ಕೂ ಅಡ್ಡಿಪಡಿಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳಿರುತ್ತಾರಾ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next