Advertisement

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

04:51 PM Oct 01, 2023 | Team Udayavani |

ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಜನಪದ ಪಂಚಾಯತ್ ಅಧ್ಯಕ್ಷೆ 30 ವರ್ಷದ ಪೂಜಾ ದಾದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಬುರ್ಹಾನ್‌ಪುರದ ತನ್ನ ನಿವಾಸದಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಖಕ್ನಾರ್ ಜನಪದ ಪಂಚಾಯತ್ ಅಧ್ಯಕ್ಷೆ ಪೂಜಾ, ಭಾರತೀಯ ಜನತಾ ಪಕ್ಷದ ಮಾಜಿ ಶಾಸಕ (ನೇಪಾನಗರ) ದಿವಂಗತ ರಾಜೇಂದ್ರ ದಾದು ಅವರ ಮಗಳು. ಬಿಜೆಪಿ ಬೆಂಬಲದೊಂದಿಗೆ ಜನಪದ ಪಂಚಾಯತ್ ಅಧ್ಯಕ್ಷೆಯಾಗಿದ್ದರು.

ಪೊಲೀಸರು ತನಿಖೆ ಆರಂಭಿಸಿದ್ದು, ಹಿರಿಯ ಅಧಿಕಾರಿ ದೇವೇಂದ್ರ ಪಾಟಿದಾರ್ ಅವರು, ಪ್ರಾಥಮಿಕ ತನಿಖೆಯಿಂದ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ ಎಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಆಕೆಯ ನಿರ್ಧಾರದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮನೋಜ್ ಲಾಧ್ವೆ ಹೇಳಿದ್ದಾರೆ.

Advertisement

ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಲೋಕಸಭೆ ಸದಸ್ಯ ಜ್ಞಾನೇಶ್ವರ್ ಪಾಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಬುರ್ಹಾನ್‌ಪುರಕ್ಕೆ ಆಗಮಿಸಿದರು.

ಪೂಜಾ ದಾದು ಅವರ ಹಿರಿಯ ಸಹೋದರಿ ಮಂಜು ದಾದು ಪ್ರಸ್ತುತ ಮಧ್ಯಪ್ರದೇಶ ಮಂಡಿ ಮಂಡಳಿಯ ಉಪಾಧ್ಯಕ್ಷರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next