Advertisement

ಬಿಜೆಪಿ ಬೆಂಬಲಿಗರ 2 ಬಸ್ ಗಳ ಮೇಲೆ ತೃಣಮೂಲ ಕಾಂಗ್ರೆಸ್ ದಾಳಿ; ಪ್ರತಿಭಟನೆ

09:02 AM Apr 04, 2019 | Team Udayavani |

ಕೋಲ್ಕತಾ:ಎರಡು ಬಸ್ ಗಳಲ್ಲಿ ತೆರಳುತ್ತಿದ್ದ ಭಾರತೀಯ ಜನತಾ ಪಕ್ಷದ ಬೆಂಬಲಿಗರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬುಧವಾರ ಪಶ್ಚಿಮಬಂಗಾಳದ ಬಂಕುರಾದಲ್ಲಿ ನಡೆದಿದೆ.

Advertisement

ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಭಾಗವಹಿಸಲು ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಎರಡು ಬಸ್ ಗಳನ್ನು ತಡೆದು ನಿಲ್ಲಿಸಿ ಹಾನಿಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಬೆಂಬಲಿಗರು ಬಂಕುರಾ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ಆಡಳಿತ ಹೊಂದಿರುವ ಪಶ್ಚಿಮಬಂಗಾಳದ ಸಿಲಿಗುರಿಯಿಂದ ಪ್ರಚಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next