Advertisement

ಟ್ವಿಟ್ಟರ್‌ನಲ್ಲಿ ಸಿದ್ದುಗೆ ಬಿಜೆಪಿ ಟಾಂಗ್‌

11:31 PM Aug 12, 2019 | Lakshmi GovindaRaj |

ಬೆಂಗಳೂರು: ಪ್ರವಾಹಪೀಡಿತ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರಿಯಾನಿ ಸವಿಯುವ ಔತಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿ ಟಾಂಗ್‌ ನೀಡಿದೆ.

Advertisement

ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ದಿನೇಶ್‌ ಗುಂಡೂರಾವ್‌, ಜಮೀರ್‌ ಅಹಮ್ಮದ್‌ ಖಾನ್‌, ಕೃಷ್ಣ ಬೈರೇಗೌಡ, ಕೆ.ಜೆ.ಜಾರ್ಜ್‌, ಡಾ.ಎಚ್‌.ಸಿ.ಮಹದೇವಪ್ಪ, ಕೆ.ಆರ್‌.ರಮೇಶ್‌ ಕುಮಾರ್‌ ಇತರರು ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹಮ್ಮದ್‌ ಅವರ ನಿವಾಸದಲ್ಲಿ ಭೋಜನ ಸವಿಯುತ್ತಿರುವ ಛಾಯಾಚಿತ್ರಗಳನ್ನು ಬಿಜೆಪಿ ಕರ್ನಾಟಕವು ಪೋಸ್ಟ್‌ ಮಾಡಿದೆ.

ಜತೆಗೆ “ಟ್ವಿಟ್ಟರ್‌ ಬೋಧಕ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯರೊಬ್ಬರ ಮನೆಯಲ್ಲಿ ಬಿರಿಯಾನಿ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಸಮಯವಿದೆ. ಆದರೆ ಪ್ರವಾಹಕ್ಕೆ ತುತ್ತಾಗಿರುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲು ಸಮಯವಿಲ್ಲ. ಬಿರಿಯಾನಿ ಭೋಜನ ಮುಗಿದ ಮೇಲಾ ದರೂ ನಿಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ನಿಮಗೆ ಮತ ನೀಡಿದ ಜನರ ಅಳಲು ಆಲಿಸಲು ಪ್ರಯತ್ನಿಸಿ’ ಎಂದು ಟ್ವೀಟ್‌ ಮಾಡಿ ಕಾಲೆಳೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next