Advertisement

Dakshina Kannada ಜಿಲ್ಲೆಯಲ್ಲಿ ಬಿಜೆಪಿ 4 ಲಕ್ಷ ಸದಸ್ಯತ್ವ ಗುರಿ: ಸತೀಶ್‌ ಕುಂಪಲ

12:20 AM Sep 05, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವತಿಯಿಂದ ಈ ಬಾರಿ ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದರು.

Advertisement

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ 2.5 ಲಕ್ಷ ಸದಸ್ಯರ ನೋಂದಣಿ ಮಾಡಲಾಗಿತ್ತು. ರಾಷ್ಟ್ರಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಚಾಲನೆ ನೀಡಿದ್ದು, ಜಿಲ್ಲೆಯಲ್ಲಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಮಂಡಲಗಳಲ್ಲಿ ಶಾಸಕರು ಚಾಲನೆ ನೀಡುತ್ತಿದ್ದಾರೆ ಎಂದರು.

ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕಸ್ತೂರಿ ಪಂಜ, ಪೂಜಾ ಪೈ, ದೇವದಾಸ ಶೆಟ್ಟಿ, ನಿತೀಶ್‌ ಶಾಂತಿವನ, ವಿಕಾಸ್‌ ಪುತ್ತೂರು, ಡಾ| ಮಂಜುಳಾ ರಾವ್‌ ಅವರು ಉಪಸ್ಥಿತರಿದ್ದರು.

          
Advertisement

Udayavani is now on Telegram. Click here to join our channel and stay updated with the latest news.

Next