Advertisement

ಎಲ್ಲ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್ ಖಚಿತ : ರಮೇಶ ಜಾರಕಿಹೊಳಿ

12:41 PM Nov 03, 2019 | Team Udayavani |

ಬೆಳಗಾವಿ: ಉಪ ಚುನಾವಣೆಯಲ್ಲಿ ಎಲ್ಲ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವದು ಖಚಿತ ಎಂದು ಗೋಕಾಕದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

Advertisement

ಅಥಣಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಜೆಪಿ ಸರಕಾರ ರಚನೆಯಾಗಲಿ ಎಂದು ನಾವು ರಾಜೀನಾಮೆ ನೀಡಿರಲಿಲ್ಲ. ದೋಸ್ತಿ ಸರಕಾರದ ನಿಲುವು ಸರಿ ಇರಲಿಲ್ಲ ಎಂಬ ಕಾರಣಕ್ಕಾಗಿ ನಾವು ಸರಕಾರ ಹಾಗೂ ಪಕ್ಷದಿಂದ ಹೊರಗೆ ಬಂದಿದ್ದೇವೆ ಎಂದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಸವದಿ ಅವರು ದೊಡ್ಡ ಮನುಷ್ಯ. ನಮಗೂ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿರುಗೇಟು ನೀಡಿದರು.

ಅಥಣಿಯಲ್ಲಿ ಮಹೇಶ ಕುಮಟಳ್ಳಿಗೆ ಟಿಕೆಟ್ ಖಚಿತ, ಇದೇ ಕಾರಣದಿಂದ ಅವರ ತಯಾರಿ ಮಾಡಲಾಗುತ್ತಿದೆ. ಎಲ್ಲ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿರುವ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ನಮಗೆ ವಿಶ್ವಾಸ ಇದೆ ಎಂದರು. ರಾಜಕಾರಣ ಎಂಬುದು ಒಂದು ಉದ್ಯಮ ಇದ್ದಂತೆ. ಬದಲಾವಣೆಗಳು ಆಗುತ್ತಲೇ ಇರುತ್ತವೆ. ಅದೇ ರೀತಿ ರಾಜಕಾರಣ ಎಂದು ಹೇಳುವ ಮೂಲಕ ರಮೇಶ ಜಾರಕಿಹೊಳಿ ಬಿಜೆಪಿ ಗೆ ಸೇರ್ಪಡೆ ಯಾಗುವ ಸುಳಿವು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next