Advertisement

ಹೊಸಕೋಟೆ ಟಿಕೆಟ್ ನನಗೆ ಅಂತ ಹೇಳಿ ಬಚ್ಚೇಗೌಡ ಈಗ ಉಲ್ಟಾ ಹೊಡೆದಿದ್ದಾರೆ; ಎಂಟಿಬಿ!

09:48 AM Nov 12, 2019 | Nagendra Trasi |

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕ್ಷೇತ್ರದ ಟಿಕೆಟ್ ನೀಡಲು ಸಂಸದ ಬಚ್ಚೇಗೌಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಒಪ್ಪಿದ್ದರು. ಆದರೆ ಈಗ ಉಲ್ಟಾ ಹೊಡೆದಿದ್ದಾರೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅಳಲು ತೋಡಿಕೊಂಡಿದ್ದಾರೆ.

Advertisement

ಹೊಸಕೋಟೆಯಲ್ಲಿ ಮಾತನಾಡಿದ ಅವರು, ಸಂಸದ ಬಚ್ಚೇಗೌಡ ಪುತ್ರ ಶರತ್ ಗೆ ಎಂಎಲ್ ಸಿ ಅಥವಾ ಲೋಕಸಭಾ ಚುನಾವಣಾ ಟಿಕೆಟ್ ನೀಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದರು ಎಂದು ಎಂಟಿಬಿ ಹೇಳಿದ್ದಾರೆ.

ಇದೀಗ ಎಂಟಿಬಿ ನಾಗರಾಜ್ ಗೆಲ್ಲಲೇಬಾರದು ಎಂದು ಶರತ್ ಬಚ್ಚೇಗೌಡ ಕಾಂಗ್ರೆಸ್ ಜತೆ ಒಳಒಪ್ಪಂದ ಮಾಡಿಕೊಂಡಿರುವುದಾಗಿ ಗಂಭೀರವಾಗಿ ಆರೋಪಿಸಿರುವ ಎಂಟಿಬಿ, ಬಚ್ಚೇಗೌಡ ಕೂಡಾ ಹೊಸಕೋಟೆ ಟಿಕೆಟ್ ನನಗೆ ನೀಡುವ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಚ್ಚೇಗೌಡರು ನನಗೆ ಹೊಸಕೋಟೆ ಕ್ಷೇತ್ರದ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಿದ ಮೇಲೆಯೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next