Advertisement

ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮುಂದಾದ ಬಿಜೆಪಿ

07:05 AM Jan 11, 2018 | |

ಹೊಳಲ್ಕೆರೆ: ಪರಿವರ್ತನಾ ಯಾತ್ರೆ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿರುವ ಪ್ರತಿಪಕ್ಷ ಬಿಜೆಪಿ
ಇದೀಗ ಪಕ್ಷ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಮುಂದಾಗಿದೆ.

Advertisement

ಈ ನಿಟ್ಟಿನಲ್ಲಿ 2008ರಲ್ಲಿ ಸಾಕಷ್ಟು ಸ್ಥಾನಗಳನ್ನು ಗಳಿಸಿ 2013ರಲ್ಲಿ ಸೋಲು ಅನುಭವಿಸಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ನೆರವಿನೊಂದಿಗೆ ಮತ್ತೆ 2008ರಲ್ಲಿ ಇದ್ದ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನ ಮಾಡಿದೆ.

ಅಲ್ಲದೆ, ಜ. 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಪರಿವರ್ತನಾ ಯಾತ್ರೆಗೆ ತೆರೆ
ಎಳೆಯುವುದಕ್ಕೂ ಮುನ್ನ ಇನ್ನೂ ಒಂದೆರಡು ಕಡೆ ಅಮಿತ್‌ ಶಾ ಅವರನ್ನು ಕರೆಸಿ ಸಮಾವೇಶ ನಡೆಸಲು ಮುಂದಾಗಿದೆ.

ಪರಿವರ್ತನಾ ಯಾತ್ರೆ ವೇಳೆ ವ್ಯಕ್ತವಾಗಿರುವ ಜನ ಬೆಂಬಲವನ್ನು ಗಮನಿಸಿ ಅಮಿತ್‌ ಶಾ ಕೂಡ ಖುಷಿಯಾಗಿದ್ದು, ಸಾಧ್ಯವಾದರೆ ಇನ್ನೂ ಒಂದೆರಡು ಸಮಾವೇಶಗಳಲ್ಲಿ ಭಾಗವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಳಲ್ಕೆರೆಯಲ್ಲಿ ನಡೆದ ಪರಿವರ್ತನಾ ಯಾತ್ರೆ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಈ ಕುರಿತಂತೆ ಅಮಿತ್‌ ಶಾ ಜತೆ ಮಾತನಾಡಿದ್ದಾರೆ. ಇನ್ನೂ ಒಂದೆರಡು ಕಡೆ ಸಮಾವೇಶದಲ್ಲಿ ಭಾಗವಹಿಸಿ ಶಕ್ತಿ ತುಂಬುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next