Advertisement

Ram Mandir; ಬಿಜೆಪಿಯಿಂದ ನಾಳೆ ಶಾ, ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ

06:49 PM Jan 01, 2024 | Team Udayavani |

ಹೊಸದಿಲ್ಲಿ: ಜನವರಿ 22 ರಂದು ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಂಗಳವಾರ ಪಕ್ಷದ ನಾಯಕರ ಮಹತ್ವದ ಸಭೆ ನಡೆಸಲಿದೆ.

Advertisement

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರತಿ ರಾಜ್ಯದಿಂದ ಪಕ್ಷದ ಇಬ್ಬರು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ರಾಮಮಂದಿರ ಆಂದೋಲನ ಮತ್ತು ಮಂದಿರ ನಿರ್ಮಾಣದಲ್ಲಿ ಪಕ್ಷದ ಪಾತ್ರವನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತಿದ್ದು. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಹೊಸ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಬೂತ್ ಮಟ್ಟದ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ. ಚುನಾವಣ ಪ್ರಚಾರದ ಸಮಯದಲ್ಲಿ, ಮಂದಿರ ನಿರ್ಮಾಣಕ್ಕೆ ವಿರೋಧ ಪಕ್ಷಗಳು ಹೇಗೆ ಅಡ್ಡಿಪಡಿಸಲು ಪ್ರಯತ್ನಿಸಿದವು ಎಂಬುದನ್ನು ಬಿಜೆಪಿ ಎತ್ತಿ ತೋರಿಸಲಿದೆ ಎಂದು ಹೇಳಲಾಗಿದೆ.

ರಾಮಮಂದಿರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮತ್ತು ಬೆಂಬಲ ನೀಡಲು ಬಿಜೆಪಿ ಈಗಾಗಲೇ ವಾಗ್ದಾನ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next