Advertisement

ರಾಜ್ಯಸಭೆ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆ

06:20 AM Mar 15, 2018 | Team Udayavani |

ಬಸವಕಲ್ಯಾಣ: ರಾಜ್ಯಸಭೆ ಚುನಾವಣೆ ನಂತರ ಅ ಧಿಕೃತವಾಗಿ ಬಿಜೆಪಿ ಸೇರುವುದಾಗಿ ಜೆಡಿಎಸ್‌ ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕೆಂದು ನನ್ನ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದೇನೆ. ಪಕ್ಷಕ್ಕೆ ಸೇರುವಂತೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಆ ಪಕ್ಷದ ನಾಯಕರು ಬೆಂಗಳೂರು ಅಥವಾ ಬಸವಕಲ್ಯಾಣದಲ್ಲಿ ಯಾವ ಸ್ಥಳದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ತಿಳಿಸುತ್ತಾರೋ ಅಲ್ಲಿ ಸೇರ್ಪಡೆಗೊಳ್ಳಲಿದ್ದೇನೆ ಎಂದರು.

ಜೆಡಿಎಸ್‌ನಿಂದ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ನಂತರ ಪಕ್ಷ ತೊರೆಯುತ್ತೇನೆ. ಕುಮಾರಸ್ವಾಮಿ ಹಾಗೂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ. ಇಬ್ಬರು ಒಂದಾಗಿದ್ದೇವೆ. ರಾಜ್ಯದಲ್ಲಿ ಪ್ರತ್ಯೇಕ ಧರ್ಮ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ. ವೀರಶೈವರು ಮತ್ತು ಲಿಂಗಾಯತರು ಇಬ್ಬರೂ ಒಂದಾಗಿ ಸಾಗುವ ಮೂಲಕ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಒಮ್ಮತದ ಹೋರಾಟ ನಡೆಸಬೇಕಾದ ಅಗತ್ಯವಿದೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next