Advertisement

ಈ ಹಿಂದೆ ಶಿವಸೇನೆಯನ್ನು ಬಿಜೆಪಿಯವರು ಗುಲಾಮರಂತೆ ನೋಡುತ್ತಿದ್ದರು: ಸಂಜಯ್ ರಾವತ್

04:16 PM Jun 13, 2021 | Team Udayavani |

ಮುಂಬೈ: ಮಹಾರಾಷ್ಟ್ರದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ಶಿವಸೇನೆಯನ್ನು ಗುಲಾಮರಂತೆ ನೋಡಲಾಗುತ್ತಿತ್ತು. ಅದಲ್ಲದೆ ಆ ಅವಧಿಯಲ್ಲಿ ಪಕ್ಷವನ್ನು ಮುಗಿಸಲು ಪ್ರಯತ್ನಗಳೂ ನಡೆದಿದ್ದವು ಎಂದು ಶಿವಸೇನೆ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.

Advertisement

ಶಿವಸೇನಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾವತ್, ಈ ಹಿಂದಿನ ಸರ್ಕಾರದಲ್ಲಿ ನಾವು ಭಾಗವಾಗಿದ್ದೆವು. ನಮಗೆ ದ್ವಿತೀಯ ದರ್ಜೆ ಸ್ಥಾನಮಾನ ನೀಡಲಾಗಿತ್ತು. ಬಿಜೆಪಿಯವರು ನಮ್ಮನ್ನು ಗುಲಾಮರಂತೆ ಕಾಣುತ್ತಿದ್ದರು. ಅಧಿಕಾರವನ್ನು ದುರಪಯೋಗ ಪಡಿಸಿಕೊಂಡು ಪಕ್ಷವನ್ನು ಅಂತ್ಯ ಮಾಡಲು ಪಯತ್ನಗಳೂ ನಡೆದಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ:ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುತ್ತೇವೆ; ತುಳುವಿನಲ್ಲಿ ಟ್ವೀಟ್ ಮಾಡಿದ ನಳಿನ್ ಕಟೀಲ್

ಶಿವಸೇನೆ ಅಧ್ಯಕ್ಷ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾಗಿದ್ದರು. ಇದರ ಮರುದಿನ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ಈ ಆರೋಪ ಮಾಡಿದ್ದಾರೆ.

ಬಿಜೆಪಿಯೊಂದಿಗೆ ಈ ಹಿಂದೆ ಸಖ್ಯ ಹೊಂದಿದ್ದ ಶಿವಸೇನೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಬೇರೆ ಬೇರೆಯಾಗಿದ್ದವು. ಮುಖ್ಯಮಂತ್ರಿ ಸ್ಥಾನದ ವಿಚಾರದ ಬಗ್ಗೆ ಭಿನ್ನಮತ ಉಂಟಾಗಿ, ಬಿಜೆಪಿ ಮೈತ್ರಿ ತೊರೆದ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆಗೆ ಕೈಜೋಡಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next