Advertisement

ನನ್ನನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ರಾಕೇಶ್‌ ಟಿಕಾಯತ್‌

12:08 PM Jun 05, 2022 | Team Udayavani |

ಮೀರತ್‌: “ನನ್ನನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ’- ಹೀಗೆಂದು ಭಾರತೀಯ ಕಿಸಾನ್‌ ಯೂನಿಯನ್‌ನ ಮುಖಂಡ ರಾಕೇಶ್‌ ಟಿಕಾಯತ್‌ ಆರೋಪಿಸಿದ್ದಾರೆ.

Advertisement

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ತಮ್ಮ ಮೇಲೆ ನಡೆದ ದಾಳಿಯೇ ಅದಕ್ಕೆ ಪುರಾವೆ ಎಂದು ಅವರು ಶನಿವಾರ ದೂರಿದ್ದಾರೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ನ ಸಭೆಯಲ್ಲಿ ಮಾತನಾಡಿದ ಅವರು, ನನ್ನನ್ನು ಕೊಲ್ಲುವ ಸಂಚನ್ನು ಅನುಷ್ಠಾನಗೊಳಿಸುವ ಮೂಲಕ‌ ಟಿಕಾಯತ್‌ ಕುಟುಂಬ ಮತ್ತು ರೈತರ ಸಂಘಟನೆಯನ್ನು ಒಡೆಯಲು ಸಂಚು ರೂಪಿಸಲಾಗಿದೆ.

2021ರ ಡಿಸೆಂಬರ್‌ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್‌ ರಾವತ್‌ ಅವರಿಗೆ ಅಂತಿಮ ನಮನ ಸಲ್ಲಿಸಲು ಹೋಗಿದ್ದ ಸಂದರ್ಭದಲ್ಲಿಯೇ ನನ್ನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next