Advertisement

ಅನಿಲ್‌ ಚಿಕ್ಕಮಾದುಗೆ ಬಿಜೆಪಿ ಗಾಳ?

06:10 AM Sep 16, 2018 | Team Udayavani |

ಮೈಸೂರು: ರಾಜ್ಯದಲ್ಲಿ ಆಪರೇಷನ್‌ ಕಮಲ ಆರಂಭವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ
ಉರುಳಿಸಲು ಕಾಂಗ್ರೆಸ್‌ ಶಾಸಕರನ್ನು ಸೆಳೆಯಲಾಗುತ್ತಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾದು ಅವರಿಗೂ ಗಾಳ ಹಾಕಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

Advertisement

ಬಿಜೆಪಿಯಲ್ಲಿರುವ ನಾಯಕ ಸಮಾಜದ ಪ್ರಭಾವಿ ಮುಖಂಡರೊಬ್ಬರು ಚಿಕ್ಕಮಾದು ಜತೆಗೆ ಮಾತುಕತೆ ನಡೆಸಿದ್ದಾರೆಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಮಾದು, ಬಿಜೆಪಿಯ ಯಾವುದೇ ಆಮಿಷಗಳಿಗೆ ಬಲಿಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಆರ್‌.ಧ್ರುವನಾರಾಯಣ ಅವರನ್ನು ಬಿಟ್ಟು ಹೋಗುವುದಿಲ್ಲ. ಈ ಸಂಬಂಧ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರ ನೀಡುತ್ತೇನೆಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next