Advertisement

ನಿಮಗೆ ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ ? ಡಿಕೆಶಿ ವಿರುದ್ಧ ಬಿಜೆಪಿ ವಾಗ್ದಾಳಿ

05:42 PM Jun 21, 2021 | Team Udayavani |

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ಮತ್ತೆ ಶುರುವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟ್ ದಾಳಿ ಮುಂದುವರೆದಿದೆ.

Advertisement

ಇಂದು ( ಜೂನ್ 21) ಹಲವು ವಿಚಾರಗಳನ್ನಿಟ್ಟುಕೊಂಡು ಕನಕಪುರ ಬಂಡೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಡಿಕೆಶಿಯುವರು ಕಾಂಗ್ರೆಸ್ಸಿನಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯರನ್ನು ತಲೆಯಲ್ಲಿ ಹೊತ್ತು ತಿರುಗಾಡುತ್ತಿರುವ ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯ ತೋರುತ್ತಿಲ್ಲ. ನಿಮಗೆ ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವ ಡಿಕೆಶಿ, ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಹೋರಾಟದ ಬಗ್ಗೆ ಮೌನವಾಗಿದ್ದಾರೆ. ಮುಂದಿನ ಸಿಎಂ ಸ್ಥಾನದ ವಿಚಾರವನ್ನು‌ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ಮುನ್ನಲೆಗೆ ಬಿಟ್ಟಿದ್ದಾರೆ, ಆದರೆ ದುರ್ಬಲ ಅಧ್ಯಕ್ಷರಿಗೆ ಏನೂ ಮಾಡಲಾಗುತ್ತಿಲ್ಲ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರೇ ಸುಪ್ರೀಂ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರೇ ನಿಮಗೆ ಕ್ರಮ ಕೈಗೊಳ್ಳಲು ಧೈರ್ಯವಿಲ್ಲವೇ? ಜಮೀರ್ ವಿರುದ್ಧ ಕ್ರಮ ತೆಗೆದುಕೊಂಡರೆ ವಲಸೆ ನಾಯಕ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗುವ ಭಯ ನಿಮ್ಮನ್ನು ಕಾಡುತ್ತಿದೆಯೇ, ಡಿಕೆಶಿ? ಎಂದು ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next