Advertisement

ಆಹಾ! ತೋರಿಕೆಯ ನಾಟಕ ಚೆನ್ನಾಗಿದೆ: ಮೇಕೆದಾಟು 2.0 ಸಮಾಪ್ತಿ ಬಳಿಕ ಬಿಜೆಪಿ

11:18 AM Mar 04, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೈಗೊಂಡಿದ್ದ ಪಾದಯಾತ್ರೆಯ ಎರಡನೇ ಹಂತ ಮುಕ್ತಾಯವಾದ ಬಳಿಕವೂ ಬಿಜೆಪಿ ಟೀಕೆಗಳನ್ನು ಮುಂದುವರಿಸಿದ್ದು, ಟ್ವೀಟ್ ಗಳ ಮೂಲಕ ಆಹಾ! ತೋರಿಕೆಯ ನಾಟಕ ಚೆನ್ನಾಗಿದೆ ಎಂದು ಜರಿದಿದೆ.

Advertisement

ಇದು ಬರೀ ಕೆಮರಾ ಕಣ್ಣಿಗಾಗಿ ಜೊತೆಯಾದ ಕ್ಷಣವಷ್ಟೇ. ಒಳಗೊಳಗೆ ಒಬ್ಬರನ್ನೊಬ್ಬರು ಹಣಿಯಲು ತಂತ್ರ ಹೆಣೆಯುತ್ತಿದ್ದಾರೆ.ಒಂದು ವೇಳೆ ಇದೇ ವೇದಿಕೆಯಲ್ಲಿ ಮುಂದಿನ ಚುನಾವಣೆಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದರೆ, ಜೊತೆಯಾಗಿರುವ ʼಕೈʼ ಗಳು ಕೋವಿಡ್‌ ನಿಯಮ ಪಾಲಿಸುತ್ತಿದ್ದವು! ಸುಳ್ಳಿನಜಾತ್ರೆ ಎಂದು ಟೀಕಿಸಿದೆ.

ಮನೆಯೊಂದು, ನೂರು ಬಾಗಿಲು ಆಗಿರುವ ಕಾಂಗ್ರೆಸ್ ಈಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದೆ.ಈ ಒಗ್ಗಟ್ಟು ತೋರಿಕೆಯದ್ದೆಂದು ಸ್ವತಃ ಅದೇ ಪಕ್ಷದವರಿಗೂ ತಿಳಿದಿದೆ.ಈ ಹಿಂದೆ ಸಾಲಾಗಿ ಕೈ ಎತ್ತಿದ್ದವರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು, ಕೊನೆಗೆ ಶಾಂತಿವನದಲ್ಲಿ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿ ಅಶಾಂತಿ ಸೃಷ್ಟಿಸಿದರು ಎಂದು ಬರೆದಿದೆ.

ಮೇಕೆದಾಟು ಮೂಲಕ ಕಾಂಗ್ರೆಸ್ ಪಕ್ಷ ಸಾಧಿಸಿದ ಎರಡು ಪ್ರಮುಖ ಸಾಧನೆಗಳು.ಮೇಕೆದಾಟು ಪಾದಯಾತ್ರೆ 1.0 – ಕೊರೋನ ಹಬ್ಬಿಸಿದ್ದು, ಮೇಕೆದಾಟು ಪಾದಯಾತ್ರೆ 2.0 – ಟ್ರಾಫಿಕ್ ಜಾಮ್ ಮಾಡಿದ್ದು ಎಂದು ಟ್ವೀಟ್ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next