Advertisement

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

01:10 AM Apr 27, 2024 | Team Udayavani |

ಲಕ್ನೋ: ಉತ್ತರಪ್ರದೇಶದ ಪ್ರತಿಷ್ಠಿತ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಂಸದ ವರುಣ್‌ ಗಾಂಧಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಪಿಲಿಭಿತ್‌ ಕ್ಷೇತ್ರದ ಹಾಲಿ ಸಂಸದರಾಗಿದ್ದರೂ, ಟಿಕೆಟ್‌ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಪಿಲಿಭಿತ್‌ಗೆ ಪರ್ಯಾಯವಾಗಿ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರುಣ್‌ ಅವರಿಗೆ ಆಫ‌ರ್‌ ನೀಡಲಾಗಿತ್ತು.

Advertisement

ಸೋದರ ಸಂಬಂಧಿ ಕಾಂಗ್ರೆಸ್‌ನ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಬಹುದಾದ ಈ ಕ್ಷೇತ್ರದಿಂದ ತಾವು ಸ್ಪರ್ಧಿಸಿದರೆ, ವೈಯಕ್ತಿಕ ಹೋರಾಟಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next