Advertisement

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

08:16 PM Dec 06, 2021 | Team Udayavani |

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿಯ ‘ಭೀಷ್ಮ’ ಎಂದು ಕರೆಸಿಕೊಳ್ಳುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉರಿಮಜಲು ಕೆ.ರಾಮ್ ಭಟ್ ಅವರು ಸೋಮವಾರ ವಿಧಿ ವಶರಾಗಿದ್ದಾರೆ. ಅವರಿಗೆ 92 ವರ್ಷ ಪ್ರಾಯವಾಗಿತ್ತು.

Advertisement

ವಾರ್ಧಕ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಕೊಂಬೆಟ್ಟಿನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವಕೀಲರಾಗಿದ್ದ ಭಟ್, ಜನಸಂಘದ ನಾಯಕರಾಗಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಪುತ್ತೂರು ಪುರಸಭೆಯ ಅಧ್ಯಕ್ಷ, ಕ್ಯಾಂಪ್ಕೋ ಅಧ್ಯಕ್ಷರಾಗಿದ್ದರು.

1978 ಮತ್ತು 1983 ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.

ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಭಟ್ , ಅಟಲ್ ಬಿಹಾರಿ ವಾಜಪೇಯಿ, ಲಾಲ್‌ಕೃಷ್ಣ ಅಡ್ವಾಣಿ ಸಹಿತ ಹಲವು ದಿಗ್ಗಜ ನಾಯಕರ ಒಡನಾಟ ಹೊಂದಿದ್ದರು.

Advertisement

ಭಟ್ ಅವರ ನಿಧಾನಕ್ಕೆ ಬಿಜೆಪಿ ನಾಯಕರು ಸೇರಿದಂತೆ ಅಪಾರ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next