Advertisement

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಯತ್ನಿಸುತ್ತಿದೆ: ಸಚಿವೆ ಅತಿಶಿ ಆರೋಪ

01:26 PM Apr 12, 2024 | Team Udayavani |

ನವದೆಹಲಿ: ಆಪ್ ಸರ್ಕಾರವನ್ನು ಕೆಳಗಿಳಿಸಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

Advertisement

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಆಪ್ ಸರಕಾರವನ್ನು ನಿರ್ನಾಮ ಮಾಡಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಇದರ ಮುಂದುವರೆದ ಭಾಗವಾಗಿಯೇ ಕೇಂದ್ರ ಆಪ್ ನಾಯಕರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತನ್ನ ಕೈಗೊಂಬೆಯಂತೆ ಕುಣಿಸುತ್ತಿದೆ ಇದಕೆಲ್ಲ ನಾವು ಹೆದರುವವರಲ್ಲ, ಒಂದು ವೇಳೆ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದರೆ ಕಾನೂನು ಬಾಹಿರವಾಗಲಿದೆ, ಅಲ್ಲದೆ ಇದು ಜನರ ಆಯ್ಕೆಯ ವಿರುದ್ಧವಾಗಿದೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಕಾನೂನುಬಾಹಿರ, ಅಸಂವಿಧಾನಿಕ ಮತ್ತು ದೆಹಲಿ ಜನತೆಯ ಆದೇಶಕ್ಕೆ ವಿರುದ್ಧವಾದುದು ಎಂದು ಬಿಜೆಪಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಅವರು ಹೇಳಿದರು. ದೆಹಲಿಯ ಜನರು ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಬಳಸಿಕೊಂಡು ಬಿಜೆಪಿ ಏನೇ ನಾಟಕವಾಡಿದರೂ ನಾವು ಬೆದರುವ ಪ್ರಶ್ನೆ ಇಲ್ಲ ಎಂದು ಅತಿಶಿ ಹೇಳಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next