Advertisement

ಬಿಜೆಪಿಯನ್ನು ಕೇಂದ್ರದಿಂದ ಕಿತ್ತೆಸೆಯಲಾಗುವುದು: ಮಮತಾ

07:24 PM Dec 03, 2018 | Team Udayavani |

ಕೇಶಿಯಾರಿ : ಪಶ್ಚಿಮ ಬಂಗಾಲದಿಂದ ಸಿಪಿಐಎಂ ಅನ್ನು ಕಿತ್ತೆಸೆದ ಹಾಗೆ ಕೇಂದ್ರದಿಂದ ಬಿಜೆಪಿಯನ್ನು ಕಿತ್ತೆಸೆಯಲಾಗುವುದು ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

Advertisement

ಕೇಂದ್ರದಲ್ಲಿನ ಭಾರತೀಯ ಜನತಾ ಪಕ್ಷದ ಸರಕಾರ ದೇಶದಲ್ಲಿನ ಐತಿಹಾಸಿಕ ಸ್ಥಳಗಳ ಹೆಸರು ಬದಲಾಯಿಸಿರುವುದನ್ನು ಬಿಟ್ಟರೆ ಬೇರೇನನ್ನೂ ಮಾಡಿಲ್ಲ ಎಂದು ಟೀಕಿಸಿದ ಮಮತಾ, ಬಿಜೆಪಿಯ ಬಗ್ಗೆ ನಮಗೇನೂ ಭಯವಿಲ್ಲ ಎಂದು ಹೇಳಿದರು.

“ದಿಲ್ಲಿಯ ಕೆಂಗಣ್ಣಿನ ಬಗ್ಗೆ ನಮಗೇನೂ ಹೆದರಿಕೆ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕೇಂದ್ರದಿಂದ ಕಿತ್ತೆಸೆಯಲಾಗುವುದು. ಇದು ಪಣ ಮತ್ತು ನಾವಿದಕ್ಕೆ ಬದ್ಧರಾಗಿರುತ್ತೇವೆ’ ಎಂದು ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಮಿಡ್ನಾಪುರದಲ್ಲಿ ರಾಲಿಯೊಂದರಲ್ಲಿ ಮಾತನಾಡುತ್ತಾ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next