Advertisement

ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ: ಅಮಿತ್ ಶಾ

06:19 PM Feb 14, 2023 | Team Udayavani |

ಹೊಸದಿಲ್ಲಿ: ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ನಾನು ಅಲ್ಲಿನ ಜನರ ಭಾವನೆಗಳನ್ನು ನೋಡಿದ್ದೇನೆ ಮತ್ತು ಜನಸಾಮಾನ್ಯರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಸಹ ನೋಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಹೇಳಿದರು.

Advertisement

ಸಂದರ್ಶನದಲ್ಲಿ ಮಾತನಾಡಿರುವ ಅವರು ನಾನು ಕರ್ನಾಟಕದಲ್ಲಿ ಕಳೆದೆರಡು ತಿಂಗಳಲ್ಲಿ ಐದು ಬಾರಿ ಹೋಗಿ ಬಂದೆ. ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿದ್ದೇನೆ, ಮೋದಿ ಜನಪ್ರಿಯತೆಯನ್ನು ಕಣ್ಣಾರೆ ಕಂಡಿದ್ದೇನೆ. ಅಲ್ಲಿ ತುಂಬಾ ದೊಡ್ಡ ಮಟ್ಟದ ಬಹುಮತವು ಬಿಜೆಪಿಗೆ ಸಿಗಲಿದೆ ಎಂದಿದ್ದಾರೆ.

ಇದನ್ನೂ ಓದಿ:ವನಿತಾ ಟಿ20 ವಿಶ್ವಕಪ್‌ ದೊಡ್ಡ ಅಂತರದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

ನಾನು ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಹೋಗಿ ಬಂದಿದ್ದೇನೆ. ಮಂಡ್ಯಕ್ಕೂ ಹೋಗಿ ಬಂದಿದ್ದೇನೆ. ಅಲ್ಲಿ ಎಂದೂ ಆಗಿರದಂತಹ ದೊಡ್ಡ ಸಮಾವೇಶ ನಡೆದಿದೆ. ಮಂಡ್ಯದ ಜನತೆಯೂ ಪರಿವಾರವಾದಿ ಪಕ್ಷಗಳಿಂದ ದೂರವಾಗಿದ್ದಾರೆ. ಬಿಜೆಪಿಯ ಅಭಿವೃದ್ಧಿ ರಾಜಕೀಯವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ ಎಂದು ಅಮಿತ್ ಶಾ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next