Advertisement

ರೆಡ್ಡಿ ನೂತನ ಪಕ್ಷದಿಂದ ಬಿಜೆಪಿಗಿಲ್ಲ ಹಾನಿ: ಸಚಿವ ಪ್ರಹ್ಲಾದ್‌ ಜೋಷಿ

11:50 PM Dec 25, 2022 | Team Udayavani |

ಧಾರವಾಡ: ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುವುದರಿಂದ ಬಿಜೆಪಿಗೆ ಯಾವುದೇ ಹಾನಿ ಆಗದು. ಬಿಜೆಪಿ ಸಿದ್ಧಾಂತದ ಮೇಲೆ ಚುನಾವಣೆ ಎದುರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷ ಕಟ್ಟುವುದಕ್ಕೆ ಹಾಗೂ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ.

ಆದರೆ ಪಕ್ಷ ಕಟ್ಟುವವರು, ಸ್ಪರ್ಧಿಸುವವರು ಹುಚ್ಚರಿರಬಾರದು. ರೆಡ್ಡಿ ಅವರು ಕಟ್ಟುವ ಪಕ್ಷ ಬಿಜೆಪಿಯ “ಎ’ ಅಥವಾ “ಬಿ’ ಟೀಮ್‌ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ. ರೆಡ್ಡಿಯವರನ್ನು ಪಕ್ಷಕ್ಕೆ ಕರೆತರುವ ಹಾಗೂ ಶ್ರೀರಾಮುಲು ಪಕ್ಷ ತೊರೆಯುವ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಜತೆಗೆ ಮಾತನಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next