Advertisement

ಹರ್ಯಾಣ-ವಿವಾದಿತ ಶಾಸಕ ಗೋಪಾಲ್ ಕಾಂಡಾ ಬೆಂಬಲ ಪಡೆಯಲ್ಲ; ಬಿಜೆಪಿ

09:44 AM Oct 27, 2019 | Nagendra Trasi |

ಚಂಡೀಗಢ್: ಹರ್ಯಾಣದಲ್ಲಿ ನೂತನವಾಗಿ ರಚನೆಯಾಗಲಿರುವ ಸರ್ಕಾರಕ್ಕೆ ವಿವಾದಿತ ಶಾಸಕ ಗೋಪಾಲ್ ಕಾಂಡಾ ಅವರ ಬೆಂಬಲ ಪಡೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಸ್ಪಷ್ಟಪಡಿಸಿದ್ದಾರೆ.

Advertisement

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಬಹುಮತಕ್ಕಾಗಿ 46 ಸ್ಥಾನಪಡೆಯಲು ಹರ್ಯಾಣ ಲೋಕ್ ಹಿತ್ ಪಕ್ಷದ ಶಾಸಕ ಹಾಗೂ ಇತರ ಏಳು ಮಂದಿ ಪಕ್ಷೇತರರ ಶಾಸಕರನ್ನು ಬಿಜೆಪಿ ಸಂಪರ್ಕಿಸಿತ್ತು. ಆದರೆ ಗೋಪಾಲ್ ಕಾಂಡಾ ಬೆಂಬಲ ಪಡೆಯುತ್ತಿರುವುದುಕ್ಕೆ ವಿಪಕ್ಷ ಸೇರಿದಂತೆ ಬಿಜೆಪಿಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು.

ಗೋಪಾಲ್ ಕಾಂಡಾ ಬೆಂಬಲ ವಿಷಯ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಪಕ್ಷದ ಹಿರಿಯ ನಾಯಕಿ ಉಮಾ ಭಾರತಿ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಗೋಪಾಲ್ ಕಾಂಡಾ ಬೆಂಬಲ ಪಡೆಯುವುದಿಲ್ಲ ಎಂದು ರವಿಶಂಕರ್ ಪ್ರಸಾದ್ ಸುದ್ದಿಗಾರರ ಜತೆ ಮಾತನಾಡುತ್ತ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next