Advertisement

ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ; ಕೋಲಾರಕ್ಕೆ ಮುನಿಸ್ವಾಮಿ

10:40 AM Mar 25, 2019 | Team Udayavani |

ಹೊಸದಿಲ್ಲಿ: ಬಿಜೆಪಿ ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದೆ ಕಾಂಗ್ರೆಸ್‌ ಬಂಡಾಯ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್‌ ಅವರಿಗೆ ಬೆಂಬಲ ಘೋಷಿಸಿದೆ.

Advertisement

ಜೆ.ಪಿ.ನಡ್ಡಾ ಅವರು ಬಿಜೆಪಿ ಅಭ್ಯರ್ಥಿಗಳ ಐದನೆ ಪಟ್ಟಿ ಬಿಡುಗಡೆ ಗೊಳಿಸಿದ್ದು, ಪಟ್ಟಿಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಕೋಲಾರ ಕ್ಷೇತ್ರಕ್ಕೆ ಎಸ್‌.ಮುನಿಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಇನ್ನೂ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಬೇಕಾಗಿದೆ.

ಚಿಕ್ಕೋಡಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ರಾಯಚೂರು ಮತ್ತು ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನು ಪ್ರಕಟಿಸಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next