Advertisement

ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಖಚಿತ

12:36 AM Apr 13, 2019 | Lakshmi GovindaRaju |

ಬೆಂಗಳೂರು: “ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲೂ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಿಂದ ಜಯಗಳಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ,’ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದರು.

ತಪ್ಪದೇ ಮತ ಹಾಕಿ: ನಾಗರಿಕರು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು. ವಿಶೇಷವಾಗಿ ಬೆಂಗಳೂರಿಗರಲ್ಲಿ ಮತ ಹೊಂದಿರುವ ಮತದಾರರು ಹಕ್ಕು ಚಲಾಯಿಸುವಂತೆ ಎಸ್‌.ಎಂ.ಕೃಷ್ಣ ಅವರು ಮನವಿ ಮಾಡಿದರು.

ವಿಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು, ಎಚ್‌.ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಗೆ ಎಸ್‌.ಎಂ. ಕೃಷ್ಣ ಮೈಸೂರು ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ಸೇರಿಕೊಂಡರು. ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆì.ಮಿಲ್‌ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ತೇಜಸ್ವಿ ಸೂರ್ಯ ಪರ ಮತಯಾಚಿಸಿದರು.

ಇದಕ್ಕೂ ಮೊದಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಯು ಗೋವಿಂದರಾಜನಗರ, ಪ್ರಶಾಂತ ನಗರ, ಮೂಡಲಪಾಳ್ಯ, ನಾಗರಬಾವಿ ಮುಖ್ಯ ರಸ್ತೆ ಮಾರ್ಗವಾಗಿ ಅನುಭವನಗರ, ಮಾರುತಿ ನಗರದವರೆಗೂ ಸಂಚರಿಸಿತು.

Advertisement

ಯಾತ್ರೆಯಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಆರ್‌.ಅಶೋಕ್‌, ವಿ.ಸೋಮಣ್ಣ, ಆರ್‌.ದೇವೆಗೌಡ, ಉಮೇಶ್‌ ಶೆಟ್ಟಿ, ಅರುಣ್‌ ಸೋಮಣ್ಣ, ಮಾಜಿ ಮೇಯರ್‌ ಶಾಂತಕುಮಾರಿ, ಬುಲೆಟ್‌ ಪ್ರಕಾಶ್‌ ಭಾಗವಹಿಸಿದ್ದರು. ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next