Advertisement

BJP 2024ರಲ್ಲಿ ಗೆದ್ದರೆ ಮೋದಿ ನರೇಂದ್ರ ‘ಪುಟಿನ್’ ಆಗುತ್ತಾರೆ: ಮಾನ್

02:15 PM Jun 11, 2023 | Team Udayavani |

ಹೊಸದಿಲ್ಲಿ: ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ಮಹಾ ರ‍್ಯಾಲಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, 2024 ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ನರೇಂದ್ರ ಪುಟಿನ್ ಆಗುತ್ತಾರೆ ಎಂದು ಹೇಳಿದರು.

Advertisement

2024ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಚುನಾವಣೆಯೇ ಇರುವುದಿಲ್ಲ. ಬಿಜೆಪಿ ನಾಯಕರು ಮೋದಿಯನ್ನು ಭಾರತದ ‘ಮಲಿಕ್’ ಎಂದು ಪರಿಗಣಿಸಲು ಪ್ರಾರಂಭಿಸಿದ್ದಾರೆ. 140 ಕೋಟಿ ಭಾರತೀಯರು ಭಾರತವನ್ನು ಉಳಿಸಲು ನಿರ್ಧರಿಸಿದರೆ, ದೇಶವನ್ನು ಉಳಿಸಬಹುದು ಎಂದರು.

ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಆಮ್ ಆದ್ಮಿ ಪಕ್ಷ ದೆಹಲಿಯ ರಾಮಲೀಲಾ ಮೈದಾನದಲ್ಲಿ “ಮಹಾ ರ‍್ಯಾಲಿ” ನಡೆಸಿತು. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಎಎಪಿ ನಾಯಕ ಮತ್ತು ಸಚಿವ ಗೋಪಾಲ್ ರೈ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next