Advertisement

Union Minister ಶೋಭಾ ಪ್ರಚಾರದ ವೇಳೆ ಅಪಘಾತ: ಬಿಜೆಪಿ ಕಾರ್ಯಕರ್ತ ಮೃತ್ಯು

07:03 PM Apr 08, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ತಗುಲಿದ ಪರಿಣಾಮ ಸ್ಕೂಟರ್ ಸವಾರರಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ರಸ್ತೆಗೆ ಬಿದ್ದು ಖಾಸಗಿ ಬಸ್ ಹರಿದು ಮೃತ ಪಟ್ಟಿರುವ ಅವಘಡ ಸೋಮವಾರ ಮಧಾಹ್ನ ಕೆ.ಆರ್.ಪುರದಲ್ಲಿ ನಡೆದಿದೆ.

Advertisement

ಚುನಾವಣ ಪ್ರಚಾರದ ವೇಳೆ ಅಪಘಾತ ಸಂಭವಿಸಿದ್ದು, ಟಿಸಿ ಪಾಳ್ಯ ನಿವಾಸಿ ಪ್ರಕಾಶ್(60) ಮೃತ ದುರ್ದೈವಿ ಬಿಜೆಪಿ ಕಾರ್ಯಕರ್ತ. ರಸ್ತೆ ಬದಿ ನಿಂತಿದ್ದ ಶೋಭಾ ಅವರ ಕಾರಿನ ಬಾಗಿಲು ತೆರೆದಾಗ ಹಿಂಬದಿಯಿಂದ ಬರುತ್ತಿದ್ದ ಪ್ರಕಾಶ್ ಸ್ಕೂಟರ್ ಅಪ್ಪಳಿಸಿ ಕೆಳಗೆ ಬಿದ್ದ ವೇಳೆ ಅವರ ಮೇಲೆ ಖಾಸಗಿ ಬಸ್‌ ಹರಿದಿದೆ. ಗಂಭೀರವಾಗಿ ಗಾಯಗೊಂಡ ಪ್ರಕಾಶ್‌ ಅವರನ್ನು ತತ್ ಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಪ್ರಕಾಶ್‌ ಮೃತಪಟ್ಟಿದ್ದಾರೆ.

ಅವಘಡದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವೆ ಶೋಭಾ ಕರಂದ್ಲಾಜೆ ‘ಘಟನೆ ನಿಜಕ್ಕೂ ದುಃಖ ತಂದಿದೆ. ನಾವು ರ್‍ಯಾಲಿಗೆ ಮುಂದೆ ಹೋಗಿದ್ದೆವು. ರಸ್ತೆಯ ಬದಿಯಲ್ಲಿ ಕಾರು ನಿಲ್ಲಿಸಲಾಗಿತ್ತು. ಕಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ನಂತರ ಅವರ ಮೇಲೆ ಬಸ್ ಹರಿದಿದೆ. ಮೃತ ಬಿಜೆಪಿ ಕಾರ್ಯಕರ್ತ ಪ್ರಕಾಶ್‌ ಅವರ ಕುಟುಂಬಸ್ಥರ ಜತೆಗೆ ನಾವಿದ್ದೇವೆ. ಪಕ್ಷದ ವತಿಯಿಂದ ಪರಿಹಾರ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಕೆ.ಆರ್. ಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next