Advertisement

“ಪಾಕಿಸ್ಥಾನ್‌ ಜಿಂದಾಬಾದ್‌’ ಎಂದು ಕೂಗಿದ್ದ ಬಿಜೆಪಿ ಕಾರ್ಯಕರ್ತನ ಬಂಧನ

01:03 AM Mar 06, 2024 | Team Udayavani |

ಮಂಡ್ಯ: ಒಂದೂವರೆ ವರ್ಷದ ಹಿಂದೆ ಪಾಕಿಸ್ಥಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ನಗರದ ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

ತಾಲೂಕಿನ ರವಿ ಅಲಿಯಾಸ್‌ ಬುಲೆಟ್‌ ರವಿ ಬಂಧಿತ. ವಿಧಾನಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್‌ ಕಾರ್ಯಕರ್ತ ಹಾಗೂ ವಕೀಲ ಕನ್ನಂಬಾಡಿ ಕುಮಾರ್‌ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಕಿಸ್ಥಾನ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ, ಪ್ರಧಾನಿ ಮೊದಿ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ 2022ರ ಡಿ. 18ರಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ರವಿ ಪಾಕಿಸ್ಥಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದ.

Advertisement

Udayavani is now on Telegram. Click here to join our channel and stay updated with the latest news.

Next