Advertisement

BJP ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ : ಬಿ.ವೈ.ವಿಜಯೇಂದ್ರ

04:21 PM Feb 01, 2024 | Team Udayavani |

ಹಾವೇರಿ : ಪಂಚ ರಾಜ್ಯದ ಫಲಿತಾಂಶ ಬಳಿಕ ದೇಶದಲ್ಲಿ ಬಿಜೆಪಿ ಅಲೆ ಎದ್ದಿದ್ದು, ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಯಿತು. ಗ್ಯಾರಂಟಿ ಮೂಲಕ ಜನರ ಕಣ್ಣಿಗೆ ಮಣ್ಣೆರಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಬಡವರ, ರೈತ ವಿರೋಧಿ ಸರಕಾರಯುವಕರನ್ನ ಭಿಕ್ಷುಕರ ತರ ಕಾಣುತ್ತಿದೆ. ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ ಎಂದು ಕಿಡಿ ಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಹೇಳುತ್ತಾರೆ. ಇದು ಮಾಗಡಿ ಶಾಸಕರ ಮಾತಲ್ಲ ಮುಖ್ಯಮಂತ್ರಿಗಳೇ ಧಮ್ಕಿ ಹಾಕುವ ಕೇಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, 28 ಲೋಕಸಭಾ ಕ್ಷೇತ್ರಗಳನ್ನೂ ಬಿಜೆಪಿ-ಜೆಡಿಎಸ್ ಗೆಲ್ಲಿಸಲು ಜನ ನಿರ್ಧಾರ ಮಾಡಿದ್ದಾರೆ ಎಂದರು.

ನಿರ್ಮಲಾ ಸೀತಾರಾಮನ್ ಅವರು ಚುನಾವಣ ಗಿಮಿಕ್ ಮಾಡದೆ ದೂರದೃಷ್ಟಿ ಇರುವ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ ನವರು ಮತ್ತೊಮ್ಮೆ ಮಕ್ಮಲ್ ಟೋಪಿ ಹಾಕುವ ಕೆಲಸ ಮಾಡುತ್ತಾರೆ. ಬಿಜೆಪಿ ಮತ್ತೆ 130, 140 ಸ್ಥಾನದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next